ಮಡಿಕೇರಿ: ಲಾರಿ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಸಮೀಪದ ಕೊಯನಾಡಿನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.
ಕಾರಿನಲ್ಲಿದ್ದ ನಿಹಾದ್, ರಿಝ್ವಾನ್, ರಾಖಿಬ್ ಎಂಬವರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಮೃತ ಓರ್ವ ಯುವಕನ ಗುರುತು ಇನ್ನಷ್ಟೇ ತಿಳಿದುಬರಬೇಕಾಗಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಗೊಣಿಕೊಪ್ಪ ಮತ್ತು ಹುಣಸೂರಿನ ನಾಲ್ವರು ಯುವಕರು ದ.ಕ. ಜಿಲ್ಲೆಯ ಉಳ್ಳಾಲಕ್ಕೆ ಗುರುವಾರ ಕಾರಿನಲ್ಲಿ ತೆರಳಿದ್ದವರು ಅಲ್ಲಿಂದ ಇಂದು ವಾಪಸ್ಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಕಾರಿಗೆ ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಕೊಡಗು ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮಾಹಿತಿ ಪಡೆಯುತ್ತಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…