ಮಡಿಕೇರಿ: ಕೊಡಗು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಕಡಗದಾಳು ನಿವಾಸಿ ಸೈಯದ್ (24) ಎಂಬಾತನನ್ನು ಮಾನ ಭಂಗ ಯತ್ನದ ಆರೋಪದಡಿ ಬಂಧಿಸಲಾಗಿದೆ.
ಮಡಿಕೇರಿಯ 74 ವರ್ಷದ ವೃದ್ಧೆಯೋರ್ವರ ಮನೆಗೆ ನುಗ್ಗಿದ ಸೈಯದ್, ಮಾನ ಭಂಗಕ್ಕೆ ಯತ್ನ ಮಾಡಿರುವುದಾಗಿ ಮಡಿಕೇರಿ ನಗರ ಠಾಣೆ ಗೆ ವೃದ್ಧೆ ದೂರು ನೀಡಿದ್ದರು. ಈ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸೈಯದ್ನನ್ನು ಬಂಧಿಸಿದ್ದಾರೆ.
🏏 ಮುಂಬೈಯೊಂದಿಗೆ IPL ಗೆ ವಿದಾಯ ಘೋಷಿಸಿದ ವೆಸ್ಟ್ ಇಂಡೀಸ್ ದಿಗ್ಗಜ ಕೀರನ್ ಪೊಲಾರ್ಡ್ – Vishwanews24
ಸೈಯದ್ ಇತ್ತೀಚೆಗಷ್ಟೆ ಕೆಲಸಕ್ಕೆ ರಾಜೀನಾಮೆ ನೀಡಿದ್ದನು. ಕಳೆದ ಸೆಪ್ಟೆಂಬರ್ 22 ರಂದು ರಾತ್ರಿ ಸುಮಾರು 11 ಗಂಟೆಗೆ ವೃದ್ಧೆ ಮನೆಗೆ ಆಗಮಿಸಿದ ಸೈಯದ್ ಮನೆ ಬಾಗಿಲು ಬಡಿದಿದ್ದಾನೆ. ವೃದ್ಧೆ ಬಾಗಿಲು ತೆರೆದಕ್ಷಣ ಸೈಯದ್ ಮನೆ ಒಳಗೆ ನುಗ್ಗಿ ಮಾನ ಭಂಗಕ್ಕೆ ಯತ್ನಿಸಿದ್ದಾನೆ. ವೃದ್ಧೆ ಈ ಸಂದರ್ಭದಲ್ಲಿ ಜೋರಾಗಿ ಕಿರುಚಿಕೊಂಡಿದ್ದು, ಪಕ್ಕದ ಮನೆಯವರು ಹೊರಬರುವಷ್ಟರಲ್ಲಿ ಸೈಯದ್ ತಲೆಮರೆಸಿಕೊಂಡಿದ್ದಾನೆ.
ಈ ಸಂದರ್ಭ ತನ್ನ ಫೋನ ನ್ನು ಮನೆಯಲ್ಲೇ ಬಿಟ್ಟು ಪರಾರಿಯಾಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರಿನನ್ವಯ ಮಡಿಕೇರಿ ನಗರ ಠಾಣೆ ಉಪನಿರೀಕ್ಷಕ ಅವರು ಸೆಕ್ಷನ್ 446 ಹಾಗೂ 354ನಡಿ ಪ್ರಕರಣ ದಾಖಲಿಸಿ ಸೈಯದ್ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿ ಸೈಯದ್ ಮೊಬೈಲ್ ಘೋನನ್ನು ದೂರುದಾರರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…