ಮಡಿಕೇರಿ: ಕೊಡಗು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಕಡಗದಾಳು ನಿವಾಸಿ ಸೈಯದ್ (24) ಎಂಬಾತನನ್ನು ಮಾನ ಭಂಗ ಯತ್ನದ ಆರೋಪದಡಿ ಬಂಧಿಸಲಾಗಿದೆ.
ಮಡಿಕೇರಿಯ 74 ವರ್ಷದ ವೃದ್ಧೆಯೋರ್ವರ ಮನೆಗೆ ನುಗ್ಗಿದ ಸೈಯದ್, ಮಾನ ಭಂಗಕ್ಕೆ ಯತ್ನ ಮಾಡಿರುವುದಾಗಿ ಮಡಿಕೇರಿ ನಗರ ಠಾಣೆ ಗೆ ವೃದ್ಧೆ ದೂರು ನೀಡಿದ್ದರು. ಈ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸೈಯದ್ನನ್ನು ಬಂಧಿಸಿದ್ದಾರೆ.
🏏 ಮುಂಬೈಯೊಂದಿಗೆ IPL ಗೆ ವಿದಾಯ ಘೋಷಿಸಿದ ವೆಸ್ಟ್ ಇಂಡೀಸ್ ದಿಗ್ಗಜ ಕೀರನ್ ಪೊಲಾರ್ಡ್ – Vishwanews24
ಸೈಯದ್ ಇತ್ತೀಚೆಗಷ್ಟೆ ಕೆಲಸಕ್ಕೆ ರಾಜೀನಾಮೆ ನೀಡಿದ್ದನು. ಕಳೆದ ಸೆಪ್ಟೆಂಬರ್ 22 ರಂದು ರಾತ್ರಿ ಸುಮಾರು 11 ಗಂಟೆಗೆ ವೃದ್ಧೆ ಮನೆಗೆ ಆಗಮಿಸಿದ ಸೈಯದ್ ಮನೆ ಬಾಗಿಲು ಬಡಿದಿದ್ದಾನೆ. ವೃದ್ಧೆ ಬಾಗಿಲು ತೆರೆದಕ್ಷಣ ಸೈಯದ್ ಮನೆ ಒಳಗೆ ನುಗ್ಗಿ ಮಾನ ಭಂಗಕ್ಕೆ ಯತ್ನಿಸಿದ್ದಾನೆ. ವೃದ್ಧೆ ಈ ಸಂದರ್ಭದಲ್ಲಿ ಜೋರಾಗಿ ಕಿರುಚಿಕೊಂಡಿದ್ದು, ಪಕ್ಕದ ಮನೆಯವರು ಹೊರಬರುವಷ್ಟರಲ್ಲಿ ಸೈಯದ್ ತಲೆಮರೆಸಿಕೊಂಡಿದ್ದಾನೆ.
ಈ ಸಂದರ್ಭ ತನ್ನ ಫೋನ ನ್ನು ಮನೆಯಲ್ಲೇ ಬಿಟ್ಟು ಪರಾರಿಯಾಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರಿನನ್ವಯ ಮಡಿಕೇರಿ ನಗರ ಠಾಣೆ ಉಪನಿರೀಕ್ಷಕ ಅವರು ಸೆಕ್ಷನ್ 446 ಹಾಗೂ 354ನಡಿ ಪ್ರಕರಣ ದಾಖಲಿಸಿ ಸೈಯದ್ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿ ಸೈಯದ್ ಮೊಬೈಲ್ ಘೋನನ್ನು ದೂರುದಾರರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…