Featured

ಮಡಿಕೇರಿ – ಸಂಪಾಜೆ ಹೆದ್ದಾರಿ 20 ದಿನದಲ್ಲೇ ಸಂಚಾರಕ್ಕೆ ಸಿದ್ಧ

ಮಂಗಳೂರು : ಮಹಾಮಳೆಯ ಅವಾಂತರದಿಂದ ಸಂಪರ್ಕ ಕಡಿದುಕೊಂಡಿದ್ದ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ-ಮಡಿಕೇರಿ ರಸ್ತೆಯನ್ನು ಕೇವಲ 20 ದಿನಗಳಲ್ಲಿ ಸಂಚಾರ ಯೋಗ್ಯವಾಗಿಸುವ ಮೂಲಕ ರಾಷ್ಟ್ರೀಯ ಹೆದ್ದಾರಿ ಇಲಾಖೆ ತನ್ನ ತಾಂತ್ರಿಕ ಕೌಶಲ್ಯವನ್ನು ಎತ್ತಿ ಹಿಡಿದಿದೆ. ಕನಿಷ್ಠ ಆರು ತಿಂಗಳಿಗಿಂತಲೂ ಮೊದಲು ಕಾಮಗಾರಿ ಪೂರ್ಣವಾಗುವುದು ಸಾಧ್ಯವೇ ಎಂದು ಪ್ರಶ್ನಾರ್ಥಕ ಚಿಹ್ನೆಯಂತೆ ಗೋಚರಿಸಿದ್ದ ಪರಿಸರದಲ್ಲೀಗ ಪ್ರಾಧಿಕಾರ ಕ್ಷಿಪ್ರ ಕ್ರಾಂತಿಯನ್ನೇ ನಡೆಸಿದೆ.

ಆ. 14ರಿಂದ ಮದೆನಾಡು, ಬಳಿಕ ಮೊಣ್ಣೆಂಗೇರಿ ಹಾಗೂ ಜೋಡುಪಾಲದಲ್ಲಿ ಗುಡ್ಡ ಕುಸಿತ ಹಾಗೂ ಜಲಸ್ಫೋಟದಿಂದ ಹೆದ್ದಾರಿಯೇ ಮಾಯವಾಗಿತ್ತು. ಸಂಪಾಜೆ-ಮಡಿಕೇರಿ ಮಧ್ಯೆ 14 ಕಿ.ಮೀ. ದೂರದಲ್ಲಿ ಮೂರು ಕಡೆಗಳಲ್ಲಿ ಹೆದ್ದಾರಿಯಲ್ಲೇ
ಬೃಹತ್ ಪ್ರಪಾತ ಸೃಷ್ಟಿಯಾಗಿತ್ತು.

ಪರ್ಯಾಯ ಮಾರ್ಗ ರಚನೆ ವಿನಃ ಬೇರೆ ದಾರಿ ಇಲ್ಲ ಎಂಬ ತೀರ್ಮಾನಕ್ಕೆ ಸ್ಥಳೀಯರು ಬಂದಿದ್ದರು. ಆದರೆ ಬಳಿಕ ಆ. 21ರಂದು ರಾಷ್ಟ್ರೀಯ ಹೆದ್ದಾರಿ ಇಲಾಖೆ ದುರಸ್ತಿ ಕಾಮಗಾರಿ ಕೈಗೆತ್ತಿಕೊಂಡಿತ್ತು. ಜೋಡು ಪಾಲದಿಂದ ದ.ಕ. ವಿಭಾಗ ಹಾಗೂ ಮದೆನಾಡಿನಿಂದ ಕೊಡಗು ಹೆದ್ದಾರಿ ಇಲಾಖೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾಮಗಾರಿ ನಡೆಸಿದರು. ಸೆ.೧೧ರಂದು ಲಘು ವಾಹನ ಓಡಾಡುವಷ್ಟು ಕಾಮಗಾರಿ ಪೂರ್ತಿಗೊಂಡಿತ್ತು.

20 ದಿನದಲ್ಲಿ ರಸ್ತೆ ದುರಸ್ತಿ ಹೇಗೆ?: ಮೂರು ಕಡೆ ಉಂಟಾದ ಪ್ರಪಾತವನ್ನು ಮುಚ್ಚುವುದು ಹೆದ್ದಾರಿ ಇಲಾಖೆಗೆ ಸವಾಲಿನ ಕೆಲಸವಾಗಿತ್ತು. ಮೊದಲು, ಭೂಕುಸಿತದಿಂದಾಗಿ ಬಿದ್ದಿದ್ದ ಮುರಿದ ಮರಗಿಡಗಳನ್ನು ಅಡಿಗೆ ಹಾಕಿ ಮೇಲ್ಭಾಗದಲ್ಲಿ ಮಣ್ಣು ತುಂಬಿಸಿ ಮತಟ್ಟುಗೊಳಿಸಲಾಯಿತು. ಆದರೆ ಇದರ ಮೇಲೆ ವಾಹನ ಸಂಚರಿಸಿದರೆ, ಏಕಾಏಕಿ ಮತ್ತೆ ಕುಸಿತ ಸಂಭವಿಸುವ ಸಾಧ್ಯತೆಯಿಂದ ಅಡಿಗೆ ಹಾಕಿದ ಮರಗಿಡಗಳನ್ನು ತೆರವುಗೊಳಿ ಸಲಾಯಿತು. ಹೊಸದಾಗಿ ಜಿಯೋ ಫ್ಯಾಬ್ರಿಕ್ ಮತ್ತು ಜಿಯೋ ಗ್ರೇಡ್‌ನ್ನು ಹಾಸಲಾಯಿತು.

ಅದರ ಮೇಲಿನಿಂದ ನಾಲ್ಕು ಹಂತದವರೆಗೆ ಜಲ್ಲಿ ಸೇರಿದಂತೆ ಜಿಎಸ್‌ಬಿ ತುಂಬಿಸಿ ತಾತ್ಕಾಲಿಕವಾದರೂ ರಸ್ತೆ ಗಟ್ಟಿಯಾಗಿರಬೇಕು ಎಂದು ಜಲ್ಲಿ ಮಿಶ್ರಣ ಬಳಸಲಾಯಿತು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago