ಮಂಗಳೂರು : ಮಹಾಮಳೆಯ ಅವಾಂತರದಿಂದ ಸಂಪರ್ಕ ಕಡಿದುಕೊಂಡಿದ್ದ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ-ಮಡಿಕೇರಿ ರಸ್ತೆಯನ್ನು ಕೇವಲ 20 ದಿನಗಳಲ್ಲಿ ಸಂಚಾರ ಯೋಗ್ಯವಾಗಿಸುವ ಮೂಲಕ ರಾಷ್ಟ್ರೀಯ ಹೆದ್ದಾರಿ ಇಲಾಖೆ ತನ್ನ ತಾಂತ್ರಿಕ ಕೌಶಲ್ಯವನ್ನು ಎತ್ತಿ ಹಿಡಿದಿದೆ. ಕನಿಷ್ಠ ಆರು ತಿಂಗಳಿಗಿಂತಲೂ ಮೊದಲು ಕಾಮಗಾರಿ ಪೂರ್ಣವಾಗುವುದು ಸಾಧ್ಯವೇ ಎಂದು ಪ್ರಶ್ನಾರ್ಥಕ ಚಿಹ್ನೆಯಂತೆ ಗೋಚರಿಸಿದ್ದ ಪರಿಸರದಲ್ಲೀಗ ಪ್ರಾಧಿಕಾರ ಕ್ಷಿಪ್ರ ಕ್ರಾಂತಿಯನ್ನೇ ನಡೆಸಿದೆ.
ಆ. 14ರಿಂದ ಮದೆನಾಡು, ಬಳಿಕ ಮೊಣ್ಣೆಂಗೇರಿ ಹಾಗೂ ಜೋಡುಪಾಲದಲ್ಲಿ ಗುಡ್ಡ ಕುಸಿತ ಹಾಗೂ ಜಲಸ್ಫೋಟದಿಂದ ಹೆದ್ದಾರಿಯೇ ಮಾಯವಾಗಿತ್ತು. ಸಂಪಾಜೆ-ಮಡಿಕೇರಿ ಮಧ್ಯೆ 14 ಕಿ.ಮೀ. ದೂರದಲ್ಲಿ ಮೂರು ಕಡೆಗಳಲ್ಲಿ ಹೆದ್ದಾರಿಯಲ್ಲೇ
ಬೃಹತ್ ಪ್ರಪಾತ ಸೃಷ್ಟಿಯಾಗಿತ್ತು.
ಪರ್ಯಾಯ ಮಾರ್ಗ ರಚನೆ ವಿನಃ ಬೇರೆ ದಾರಿ ಇಲ್ಲ ಎಂಬ ತೀರ್ಮಾನಕ್ಕೆ ಸ್ಥಳೀಯರು ಬಂದಿದ್ದರು. ಆದರೆ ಬಳಿಕ ಆ. 21ರಂದು ರಾಷ್ಟ್ರೀಯ ಹೆದ್ದಾರಿ ಇಲಾಖೆ ದುರಸ್ತಿ ಕಾಮಗಾರಿ ಕೈಗೆತ್ತಿಕೊಂಡಿತ್ತು. ಜೋಡು ಪಾಲದಿಂದ ದ.ಕ. ವಿಭಾಗ ಹಾಗೂ ಮದೆನಾಡಿನಿಂದ ಕೊಡಗು ಹೆದ್ದಾರಿ ಇಲಾಖೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾಮಗಾರಿ ನಡೆಸಿದರು. ಸೆ.೧೧ರಂದು ಲಘು ವಾಹನ ಓಡಾಡುವಷ್ಟು ಕಾಮಗಾರಿ ಪೂರ್ತಿಗೊಂಡಿತ್ತು.
20 ದಿನದಲ್ಲಿ ರಸ್ತೆ ದುರಸ್ತಿ ಹೇಗೆ?: ಮೂರು ಕಡೆ ಉಂಟಾದ ಪ್ರಪಾತವನ್ನು ಮುಚ್ಚುವುದು ಹೆದ್ದಾರಿ ಇಲಾಖೆಗೆ ಸವಾಲಿನ ಕೆಲಸವಾಗಿತ್ತು. ಮೊದಲು, ಭೂಕುಸಿತದಿಂದಾಗಿ ಬಿದ್ದಿದ್ದ ಮುರಿದ ಮರಗಿಡಗಳನ್ನು ಅಡಿಗೆ ಹಾಕಿ ಮೇಲ್ಭಾಗದಲ್ಲಿ ಮಣ್ಣು ತುಂಬಿಸಿ ಮತಟ್ಟುಗೊಳಿಸಲಾಯಿತು. ಆದರೆ ಇದರ ಮೇಲೆ ವಾಹನ ಸಂಚರಿಸಿದರೆ, ಏಕಾಏಕಿ ಮತ್ತೆ ಕುಸಿತ ಸಂಭವಿಸುವ ಸಾಧ್ಯತೆಯಿಂದ ಅಡಿಗೆ ಹಾಕಿದ ಮರಗಿಡಗಳನ್ನು ತೆರವುಗೊಳಿ ಸಲಾಯಿತು. ಹೊಸದಾಗಿ ಜಿಯೋ ಫ್ಯಾಬ್ರಿಕ್ ಮತ್ತು ಜಿಯೋ ಗ್ರೇಡ್ನ್ನು ಹಾಸಲಾಯಿತು.
ಅದರ ಮೇಲಿನಿಂದ ನಾಲ್ಕು ಹಂತದವರೆಗೆ ಜಲ್ಲಿ ಸೇರಿದಂತೆ ಜಿಎಸ್ಬಿ ತುಂಬಿಸಿ ತಾತ್ಕಾಲಿಕವಾದರೂ ರಸ್ತೆ ಗಟ್ಟಿಯಾಗಿರಬೇಕು ಎಂದು ಜಲ್ಲಿ ಮಿಶ್ರಣ ಬಳಸಲಾಯಿತು.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…