ಮಂಗಳೂರು : ಮಹಾಮಳೆಯ ಅವಾಂತರದಿಂದ ಸಂಪರ್ಕ ಕಡಿದುಕೊಂಡಿದ್ದ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ-ಮಡಿಕೇರಿ ರಸ್ತೆಯನ್ನು ಕೇವಲ 20 ದಿನಗಳಲ್ಲಿ ಸಂಚಾರ ಯೋಗ್ಯವಾಗಿಸುವ ಮೂಲಕ ರಾಷ್ಟ್ರೀಯ ಹೆದ್ದಾರಿ ಇಲಾಖೆ ತನ್ನ ತಾಂತ್ರಿಕ ಕೌಶಲ್ಯವನ್ನು ಎತ್ತಿ ಹಿಡಿದಿದೆ. ಕನಿಷ್ಠ ಆರು ತಿಂಗಳಿಗಿಂತಲೂ ಮೊದಲು ಕಾಮಗಾರಿ ಪೂರ್ಣವಾಗುವುದು ಸಾಧ್ಯವೇ ಎಂದು ಪ್ರಶ್ನಾರ್ಥಕ ಚಿಹ್ನೆಯಂತೆ ಗೋಚರಿಸಿದ್ದ ಪರಿಸರದಲ್ಲೀಗ ಪ್ರಾಧಿಕಾರ ಕ್ಷಿಪ್ರ ಕ್ರಾಂತಿಯನ್ನೇ ನಡೆಸಿದೆ.
ಆ. 14ರಿಂದ ಮದೆನಾಡು, ಬಳಿಕ ಮೊಣ್ಣೆಂಗೇರಿ ಹಾಗೂ ಜೋಡುಪಾಲದಲ್ಲಿ ಗುಡ್ಡ ಕುಸಿತ ಹಾಗೂ ಜಲಸ್ಫೋಟದಿಂದ ಹೆದ್ದಾರಿಯೇ ಮಾಯವಾಗಿತ್ತು. ಸಂಪಾಜೆ-ಮಡಿಕೇರಿ ಮಧ್ಯೆ 14 ಕಿ.ಮೀ. ದೂರದಲ್ಲಿ ಮೂರು ಕಡೆಗಳಲ್ಲಿ ಹೆದ್ದಾರಿಯಲ್ಲೇ
ಬೃಹತ್ ಪ್ರಪಾತ ಸೃಷ್ಟಿಯಾಗಿತ್ತು.
ಪರ್ಯಾಯ ಮಾರ್ಗ ರಚನೆ ವಿನಃ ಬೇರೆ ದಾರಿ ಇಲ್ಲ ಎಂಬ ತೀರ್ಮಾನಕ್ಕೆ ಸ್ಥಳೀಯರು ಬಂದಿದ್ದರು. ಆದರೆ ಬಳಿಕ ಆ. 21ರಂದು ರಾಷ್ಟ್ರೀಯ ಹೆದ್ದಾರಿ ಇಲಾಖೆ ದುರಸ್ತಿ ಕಾಮಗಾರಿ ಕೈಗೆತ್ತಿಕೊಂಡಿತ್ತು. ಜೋಡು ಪಾಲದಿಂದ ದ.ಕ. ವಿಭಾಗ ಹಾಗೂ ಮದೆನಾಡಿನಿಂದ ಕೊಡಗು ಹೆದ್ದಾರಿ ಇಲಾಖೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾಮಗಾರಿ ನಡೆಸಿದರು. ಸೆ.೧೧ರಂದು ಲಘು ವಾಹನ ಓಡಾಡುವಷ್ಟು ಕಾಮಗಾರಿ ಪೂರ್ತಿಗೊಂಡಿತ್ತು.
20 ದಿನದಲ್ಲಿ ರಸ್ತೆ ದುರಸ್ತಿ ಹೇಗೆ?: ಮೂರು ಕಡೆ ಉಂಟಾದ ಪ್ರಪಾತವನ್ನು ಮುಚ್ಚುವುದು ಹೆದ್ದಾರಿ ಇಲಾಖೆಗೆ ಸವಾಲಿನ ಕೆಲಸವಾಗಿತ್ತು. ಮೊದಲು, ಭೂಕುಸಿತದಿಂದಾಗಿ ಬಿದ್ದಿದ್ದ ಮುರಿದ ಮರಗಿಡಗಳನ್ನು ಅಡಿಗೆ ಹಾಕಿ ಮೇಲ್ಭಾಗದಲ್ಲಿ ಮಣ್ಣು ತುಂಬಿಸಿ ಮತಟ್ಟುಗೊಳಿಸಲಾಯಿತು. ಆದರೆ ಇದರ ಮೇಲೆ ವಾಹನ ಸಂಚರಿಸಿದರೆ, ಏಕಾಏಕಿ ಮತ್ತೆ ಕುಸಿತ ಸಂಭವಿಸುವ ಸಾಧ್ಯತೆಯಿಂದ ಅಡಿಗೆ ಹಾಕಿದ ಮರಗಿಡಗಳನ್ನು ತೆರವುಗೊಳಿ ಸಲಾಯಿತು. ಹೊಸದಾಗಿ ಜಿಯೋ ಫ್ಯಾಬ್ರಿಕ್ ಮತ್ತು ಜಿಯೋ ಗ್ರೇಡ್ನ್ನು ಹಾಸಲಾಯಿತು.
ಅದರ ಮೇಲಿನಿಂದ ನಾಲ್ಕು ಹಂತದವರೆಗೆ ಜಲ್ಲಿ ಸೇರಿದಂತೆ ಜಿಎಸ್ಬಿ ತುಂಬಿಸಿ ತಾತ್ಕಾಲಿಕವಾದರೂ ರಸ್ತೆ ಗಟ್ಟಿಯಾಗಿರಬೇಕು ಎಂದು ಜಲ್ಲಿ ಮಿಶ್ರಣ ಬಳಸಲಾಯಿತು.
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…