ಮಡಿಕೇರಿ: ಒಂದು ದಿನದ ಕೊಡಗು ಜಿಲ್ಲಾ ಪ್ರವಾಸಕ್ಕಾಗಿ ಕೊಡಗಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಕೊಡಗಿನ ಗಡಿ ಭಾಗದ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರವನ್ನು ಕಾರಿನಲ್ಲಿ ಕುಳಿತಿದ್ದ ಸಿದ್ಧರಾಮಯ್ಯ ಮಡಿಲಲ್ಲಿಟ್ಟರಲ್ಲದೇ ಕಪ್ಫುಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಸಿದ್ಧರಾಮಯ್ಯ ಘೋಷಣೆ ಕೂಗಿದ ಘಟನೆ ಗುರುವಾರ ನಡೆದಿದೆ.
ರಾಜ್ಯದಲ್ಲಿ ಮತಾಂಧ ಟಿಪ್ಪುವಿನ ಜಯಂತಿ ಆಚರಣೆ ಜಾರಿಗೆ ತಂದು ಅಮಾಯಕರ ಕೊಲೆಗೆ ಕಾರಣರಾದ ಟಿಪ್ಪು ಭಕ್ತ ಸಿದ್ಧರಾಮಯ್ಯ ಕೊಡಗಿಗೆ ಕಾಲಿಡುವುದರಿಂದ ಮತ್ತೆ ಕೊಡಗಿನ ಶಾಂತಿ ಭಂಗವಾಗಲಿದ್ದು, ಜೊತೆಗೆ ಕೊಡವರನ್ನು ಗೋಮಾಂಸ ಭಕ್ಷಕರೆಂದು ಬಿಂಬಿಸಿರುವ ಹಿಂದು ವಿರೋಧಿ ಸಿದ್ಧರಾಮಯ್ಯ ಕೊಡಗಿಗೆ ಕಾಲಿಡಲು ಅನರ್ಹರಾಗಿದ್ದಾರೆಂದು ಬಿ.ಜೆ.ಪಿ. ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಈ ಸಂದರ್ಭ ಪೋಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ, ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿ, ಸಿದ್ಧರಾಮಯ್ಯರ ವಾಹನ ಮುಂದೆ ಚಲಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …