ಮಡಿಕೇರಿ: ಒಂದು ದಿನದ ಕೊಡಗು ಜಿಲ್ಲಾ ಪ್ರವಾಸಕ್ಕಾಗಿ ಕೊಡಗಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಕೊಡಗಿನ ಗಡಿ ಭಾಗದ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರವನ್ನು ಕಾರಿನಲ್ಲಿ ಕುಳಿತಿದ್ದ ಸಿದ್ಧರಾಮಯ್ಯ ಮಡಿಲಲ್ಲಿಟ್ಟರಲ್ಲದೇ ಕಪ್ಫುಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಸಿದ್ಧರಾಮಯ್ಯ ಘೋಷಣೆ ಕೂಗಿದ ಘಟನೆ ಗುರುವಾರ ನಡೆದಿದೆ.
ರಾಜ್ಯದಲ್ಲಿ ಮತಾಂಧ ಟಿಪ್ಪುವಿನ ಜಯಂತಿ ಆಚರಣೆ ಜಾರಿಗೆ ತಂದು ಅಮಾಯಕರ ಕೊಲೆಗೆ ಕಾರಣರಾದ ಟಿಪ್ಪು ಭಕ್ತ ಸಿದ್ಧರಾಮಯ್ಯ ಕೊಡಗಿಗೆ ಕಾಲಿಡುವುದರಿಂದ ಮತ್ತೆ ಕೊಡಗಿನ ಶಾಂತಿ ಭಂಗವಾಗಲಿದ್ದು, ಜೊತೆಗೆ ಕೊಡವರನ್ನು ಗೋಮಾಂಸ ಭಕ್ಷಕರೆಂದು ಬಿಂಬಿಸಿರುವ ಹಿಂದು ವಿರೋಧಿ ಸಿದ್ಧರಾಮಯ್ಯ ಕೊಡಗಿಗೆ ಕಾಲಿಡಲು ಅನರ್ಹರಾಗಿದ್ದಾರೆಂದು ಬಿ.ಜೆ.ಪಿ. ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಈ ಸಂದರ್ಭ ಪೋಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ, ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿ, ಸಿದ್ಧರಾಮಯ್ಯರ ವಾಹನ ಮುಂದೆ ಚಲಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…