Featured

ಮಡಿಕೇರಿ: ಹುಲಿಯ ಆತಂಕವಿದ್ದರೆ ತಲೆಯ ಹಿಂಬದಿಗೆ ಮುಖವಾಡ ಧರಿಸಿ  – Vishwanews24

ಮಡಿಕೇರಿ: ಹುಲಿಯ ಆತಂಕವಿದ್ದರೆ ತಲೆಯ ಹಿಂಬದಿಗೆ ಮುಖವಾಡ ಧರಿಸಿ

ಹುಲಿಗಳು ಎಂದಿಗೂ ಮನುಷ್ಯನ ಮೇಲೆ ಎದುರು ಭಾಗದಿಂದ ನೇರವಾಗಿ ದಾಳಿ ಮಾಡುವುದಿಲ್ಲ..

ಮಡಿಕೇರಿ: ಹುಲಿಗಳು ಎಂದಿಗೂ ಮನುಷ್ಯನ ಮೇಲೆ ಎದುರು ಭಾಗದಿಂದ ನೇರವಾಗಿ ದಾಳಿ ಮಾಡುವುದಿಲ್ಲ, ಬದಲಾಗಿ ಹಿಂಬದಿಯಿಂದ ದಾಳಿ ಮಾಡುತ್ತವೆ. ಇದರಿಂದ ಪಾರಾಗಲು ಪಶ್ಚಿಮ ಬಂಗಾಲದ ಸುಂದರ ಬನ್‌ ವ್ಯಾಪ್ತಿಯಲ್ಲಿ ತಲೆಯ ಹಿಂಭಾಗಕ್ಕೆ ಮುಖವಾಡವನ್ನು ಅಳವಡಿಸಿಕೊಳ್ಳುವ ತಂತ್ರಗಾರಿಕೆಯನ್ನು ಅನುಸರಿಸಲಾಗುತ್ತಿದ್ದು, ಇದು ಫ‌ಲಪ್ರದವಾಗಿದೆ.

ಈ ಮಾದರಿ ಕೊಡಗು ಜಿಲ್ಲೆಯಲ್ಲೂ ಉಪಯುಕ್ತವಾಗಬಹುದು ಎಂದು ಪರಿಸರ ಮತ್ತು ಆರೋಗ್ಯ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಕರ್ನಲ್‌ ಸಿ.ಪಿ. ಮುತ್ತಣ್ಣ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಲದಲ್ಲಿ ಬ್ರಹ್ಮಪುತ್ರ ನದಿ ಸಮುದ್ರ ವನ್ನು ಸೇರುವ ಸುಂದರಬನ್‌ನಲ್ಲಿ ಹುಲಿ ದಾಳಿಗೆ ಸಾಕಷ್ಟು ಮಂದಿ ಸಾವನ್ನಪ್ಪಿದ್ದು, ಅಲ್ಲಿ ಇದೀಗ ತಲೆಯ ಹಿಂಭಾಗಕ್ಕೆ ಅಳವಡಿಸುವ ಮುಖವಾಡ ಬಳಸಲಾಗುತ್ತಿದೆ. ಇದರಿಂದ ಹುಲಿ ದಾಳಿ ಪ್ರಕರಣಗಳು ಇಳಿಮುಖವಾಗಿದೆ. ಈ ಮುಖ ವಾಡ ಧರಿಸಿದಲ್ಲಿ, ದಾಳಿ ಮಾಡುವ ಹುಲಿಗೆ ವ್ಯಕ್ತಿಯ ಹಿಂಭಾಗದ ಮುಖವಾಡ ವ್ಯಕ್ತಿಯ ಮುಖದಂತೆ ಗೋಚರಿಸುವುದರಿಂದ ದಾಳಿಗೆ ಮುಂದಾಗುವುದಿಲ್ಲವೆಂದು ಗಮನ ಸೆಳೆದರು.

ಕೊಡಗು ಜಿಲ್ಲೆಯ ದಕ್ಷಿಣ ಭಾಗದಲ್ಲಿ ಹುಲಿಹಾವಳಿ ಹೆಚ್ಚಾಗುತ್ತಿದ್ದು, ಈಗಾಗಲೆ ಐವರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ರಬ್ಬರ್‌ನಿಂದ ಸಿದ್ಧಪಡಿಸಿದ ಮುಖವಾಡವನ್ನು ಬಳಸುವುದಕ್ಕೆ ಕ್ರಮ ಕೈಗೊಳ್ಳುವಂತೆ ಸರಕಾರ ಮತ್ತು ಅರಣ್ಯ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಿರುವುದಾಗಿ ಮುತ್ತಣ್ಣ ಹೇಳಿದರು.

ಜಿಲ್ಲೆಯಲ್ಲಿ ಹುಲಿ ದಾಳಿಯಿಂದ ಸಾವನ್ನಪ್ಪಿದ ಪ್ರಕರಣಗಳನ್ನು ಗಮನಿಸಿದಾಗ ಬೆಳಗ್ಗಿನ ಜಾವ ಬಹಿರ್ದೆಸೆಗೆಂದು ತೆರಳಿದವರ ಮೇಲೆ ಹುಲಿ ಹಿಂಬದಿಯಿಂದ ದಾಳಿ ನಡೆಸಿ ಕೊಂದು ಹಾಕಿರುವುದು ಸ್ಪಷ್ಟವಾಗುತ್ತಿದೆ. ಜಿಲ್ಲೆಯಲ್ಲಿ ಬಯಲು ಶೌಚ ಇಲ್ಲವೆಂದು ಹೇಳಿಕೊಳ್ಳಲಾಗುತ್ತದೆಯಾದರೂ ಸಾಕಷ್ಟು ಕಡೆಗಳಲ್ಲಿ ಇಂದಿಗೂ ಮನೆಗಳಲ್ಲಿ ಶೌಚಾಲಯಗಳ ವ್ಯವಸ್ಥೆ ಇಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಶೌಚಾಲಯಗಳಿಲ್ಲದ ಮನೆಗಳಲ್ಲಿ ಶೌಚಾಲಯಗಳ ನಿರ್ಮಾಣಕ್ಕೆ ಸರಕಾರ ಸೂಕ್ತ ಯೋಜನೆ ರೂಪಿಸುವುದು ಅವಶ್ಯಕ. ಬಯಲು ಶೌಚದಿಂದಾಗಿಯೇ ಸಾಕಷ್ಟು ಮಂದಿ ಹುಲಿ ದಾಳಿಗೆ ಸಿಲುಕುತ್ತಿರುವುದು ಗಮನಾರ್ಹ ಎಂದರು.

 

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

2 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

2 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

2 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

18 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

18 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

18 hours ago