ಮಡಿಕೇರಿ: ಹುಲಿಗಳು ಎಂದಿಗೂ ಮನುಷ್ಯನ ಮೇಲೆ ಎದುರು ಭಾಗದಿಂದ ನೇರವಾಗಿ ದಾಳಿ ಮಾಡುವುದಿಲ್ಲ, ಬದಲಾಗಿ ಹಿಂಬದಿಯಿಂದ ದಾಳಿ ಮಾಡುತ್ತವೆ. ಇದರಿಂದ ಪಾರಾಗಲು ಪಶ್ಚಿಮ ಬಂಗಾಲದ ಸುಂದರ ಬನ್ ವ್ಯಾಪ್ತಿಯಲ್ಲಿ ತಲೆಯ ಹಿಂಭಾಗಕ್ಕೆ ಮುಖವಾಡವನ್ನು ಅಳವಡಿಸಿಕೊಳ್ಳುವ ತಂತ್ರಗಾರಿಕೆಯನ್ನು ಅನುಸರಿಸಲಾಗುತ್ತಿದ್ದು, ಇದು ಫಲಪ್ರದವಾಗಿದೆ.
ಈ ಮಾದರಿ ಕೊಡಗು ಜಿಲ್ಲೆಯಲ್ಲೂ ಉಪಯುಕ್ತವಾಗಬಹುದು ಎಂದು ಪರಿಸರ ಮತ್ತು ಆರೋಗ್ಯ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಕರ್ನಲ್ ಸಿ.ಪಿ. ಮುತ್ತಣ್ಣ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪಶ್ಚಿಮ ಬಂಗಾಲದಲ್ಲಿ ಬ್ರಹ್ಮಪುತ್ರ ನದಿ ಸಮುದ್ರ ವನ್ನು ಸೇರುವ ಸುಂದರಬನ್ನಲ್ಲಿ ಹುಲಿ ದಾಳಿಗೆ ಸಾಕಷ್ಟು ಮಂದಿ ಸಾವನ್ನಪ್ಪಿದ್ದು, ಅಲ್ಲಿ ಇದೀಗ ತಲೆಯ ಹಿಂಭಾಗಕ್ಕೆ ಅಳವಡಿಸುವ ಮುಖವಾಡ ಬಳಸಲಾಗುತ್ತಿದೆ. ಇದರಿಂದ ಹುಲಿ ದಾಳಿ ಪ್ರಕರಣಗಳು ಇಳಿಮುಖವಾಗಿದೆ. ಈ ಮುಖ ವಾಡ ಧರಿಸಿದಲ್ಲಿ, ದಾಳಿ ಮಾಡುವ ಹುಲಿಗೆ ವ್ಯಕ್ತಿಯ ಹಿಂಭಾಗದ ಮುಖವಾಡ ವ್ಯಕ್ತಿಯ ಮುಖದಂತೆ ಗೋಚರಿಸುವುದರಿಂದ ದಾಳಿಗೆ ಮುಂದಾಗುವುದಿಲ್ಲವೆಂದು ಗಮನ ಸೆಳೆದರು.
ಕೊಡಗು ಜಿಲ್ಲೆಯ ದಕ್ಷಿಣ ಭಾಗದಲ್ಲಿ ಹುಲಿಹಾವಳಿ ಹೆಚ್ಚಾಗುತ್ತಿದ್ದು, ಈಗಾಗಲೆ ಐವರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ರಬ್ಬರ್ನಿಂದ ಸಿದ್ಧಪಡಿಸಿದ ಮುಖವಾಡವನ್ನು ಬಳಸುವುದಕ್ಕೆ ಕ್ರಮ ಕೈಗೊಳ್ಳುವಂತೆ ಸರಕಾರ ಮತ್ತು ಅರಣ್ಯ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಿರುವುದಾಗಿ ಮುತ್ತಣ್ಣ ಹೇಳಿದರು.
ಜಿಲ್ಲೆಯಲ್ಲಿ ಹುಲಿ ದಾಳಿಯಿಂದ ಸಾವನ್ನಪ್ಪಿದ ಪ್ರಕರಣಗಳನ್ನು ಗಮನಿಸಿದಾಗ ಬೆಳಗ್ಗಿನ ಜಾವ ಬಹಿರ್ದೆಸೆಗೆಂದು ತೆರಳಿದವರ ಮೇಲೆ ಹುಲಿ ಹಿಂಬದಿಯಿಂದ ದಾಳಿ ನಡೆಸಿ ಕೊಂದು ಹಾಕಿರುವುದು ಸ್ಪಷ್ಟವಾಗುತ್ತಿದೆ. ಜಿಲ್ಲೆಯಲ್ಲಿ ಬಯಲು ಶೌಚ ಇಲ್ಲವೆಂದು ಹೇಳಿಕೊಳ್ಳಲಾಗುತ್ತದೆಯಾದರೂ ಸಾಕಷ್ಟು ಕಡೆಗಳಲ್ಲಿ ಇಂದಿಗೂ ಮನೆಗಳಲ್ಲಿ ಶೌಚಾಲಯಗಳ ವ್ಯವಸ್ಥೆ ಇಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಶೌಚಾಲಯಗಳಿಲ್ಲದ ಮನೆಗಳಲ್ಲಿ ಶೌಚಾಲಯಗಳ ನಿರ್ಮಾಣಕ್ಕೆ ಸರಕಾರ ಸೂಕ್ತ ಯೋಜನೆ ರೂಪಿಸುವುದು ಅವಶ್ಯಕ. ಬಯಲು ಶೌಚದಿಂದಾಗಿಯೇ ಸಾಕಷ್ಟು ಮಂದಿ ಹುಲಿ ದಾಳಿಗೆ ಸಿಲುಕುತ್ತಿರುವುದು ಗಮನಾರ್ಹ ಎಂದರು.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…