Featured

ಮಣಿಪಾಲ:ಕಸ್ತೂರ್ಬಾ ಆಸ್ಪತ್ರೆಯ ನರ್ಸಿಂಗ್ ವಿಭಾಗಕ್ಕೆ ಶ್ರೇಷ್ಠತಾ ಪ್ರಮಾಣಪತ್ರ – Vishwanews24

ಮಣಿಪಾಲ:ಕಸ್ತೂರ್ಬಾ ಆಸ್ಪತ್ರೆಯ ನರ್ಸಿಂಗ್ ವಿಭಾಗಕ್ಕೆ ಶ್ರೇಷ್ಠತಾ ಪ್ರಮಾಣಪತ್ರ – Vishwanews24

 ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ  ಶುಶ್ರೂಷಾ (ನರ್ಸಿಂಗ್) ವಿಭಾಗಕ್ಕೆ ಶ್ರೇಷ್ಠತಾ (ಎಕ್ಸಲೆನ್ಸ್) ಪ್ರಮಾಣಪತ್ರವು ರಾಷ್ಟ್ರೀಯ ಆಸ್ಪತ್ರೆ ಮತ್ತು ಆರೋಗ್ಯ ಪೂರೈಕದಾರರ ಮಾನ್ಯತೆ ಪಡೆದ ಸಂಘ (ಎನ್ ಎ ಬಿ ಎಚ್), ಭಾರತೀಯ ಗುಣಮಟ್ಟದ ಮಂಡಳಿ (ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ) ಯಿಂದ ದೊರೆತಿದೆ.  ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಮಣಿಪಾಲದ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಅವರು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ   ನರ್ಸಿಂಗ್ ಸೇವೆಗಳ ವಿಭಾಗದ ಮುಖ್ಯಸ್ಥರಾದ  ಡಾ. ಶುಭ ಸೂರಿಯ  ಇವರಿಗೆ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ  ಕಸ್ತೂರ್ಬಾ ಆಸ್ಪತ್ರೆಯ ಮುಖ್ಯ ನಿರ್ವಹಣಾಧಿಕಾರಿಗಳಾದ ಸಿ ಜಿ ಮುತ್ತಣ, ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ,ಗುಣಮಟ್ಟ ಅನುಷ್ಠಾನದ ಸಲಹೆಗಾರರಾದ ಡಾ. ಸುನೀಲ್ ಸಿ ಮುಂಡ್ಕೂರ್  ಮತ್ತು ಜಿಬು ಥೋಮಸ್ ಉಪಸ್ಥಿತರಿದ್ದರು .

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಬಲ್ಲಾಳ್ ಅವರು, “ಎನ್ ಎ ಬಿ ಎಚ್ ನಿಂದ  ಶುಶ್ರೂಷಾ ಶ್ರೇಷ್ಠತೆಗಾಗಿ ಗೌರವಿಸಲ್ಪಟ್ಟಿರುವುವುದು  ಆಸ್ಪತ್ರೆಯ ನರ್ಸಿಂಗ್ ವಿಭಾಗದ ಗಣನೀಯ  ಸಾಧನೆಯಾಗಿದೆ.  ರೋಗಿಗಳಿಗೆ ಆರೈಕೆ ನೀಡುವಲ್ಲಿ ದಾದಿಯರು ನಿರ್ಣಾಯಕ ಪಾತ್ರ ವಹಿಸುತ್ತಿರುವುದರಿಂದ ಈ ಪ್ರಶಸ್ತಿಗೆ ಅವರು ಅರ್ಹರಾಗಿದ್ದಾರೆ” ಎಂದರು.

ರೋಗಿಗಳ ಆರೈಕೆ, ರೋಗಿಗಳ ಶಿಕ್ಷಣ ಮತ್ತು ಜಾಗೃತಿ, ಶುಶ್ರೂಷಾ ಸಂಪನ್ಮೂಲ ನಿರ್ವಹಣೆ, ಶುಶ್ರೂಷೆಯ ಗುಣಮಟ್ಟ, ಸಂವಹನ, ಮಾರ್ಗದರ್ಶನ ಮತ್ತು ಸೋಂಕು ನಿಯಂತ್ರಣ ಅಭ್ಯಾಸಗಳಂತಹ ಶುಶ್ರೂಷಾ ಆರೈಕಾ ವಿಭಾಗದ ಎಲ್ಲಾ ಕ್ಷೇತ್ರಗಳಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟವನ್ನು ಕಾಯ್ದುಕೊಳ್ಳುವ ಸೌಲಭ್ಯಗಳಿಗೆ ಪ್ರಮಾಣೀಕರಣವನ್ನು ನೀಡಲಾಗುತ್ತದೆ. ನರ್ಸಿಂಗ್ ಎಕ್ಸಲೆನ್ಸ್ ಎನ್ನುವುದು ಪ್ರತಿಷ್ಠಿತ ಪ್ರಮಾಣೀಕರಣ ಕಾರ್ಯಕ್ರಮವಾಗಿದ್ದು, ಆಸ್ಪತ್ರೆಗಳು ಮತ್ತು ಆರೋಗ್ಯ ರಕ್ಷಣೆಗಾಗಿ ರಾಷ್ಟ್ರೀಯ ಮಾನ್ಯತಾ ಮಂಡಳಿಯು ಅಭಿವೃದ್ಧಿಪಡಿಸಿದೆ ಮತ್ತು ಜಾರಿಗೆ ತಂದಿದೆ. ಆರೋಗ್ಯ ಉತ್ತೇಜನ, ರೋಗಗಳ ತಡೆಗಟ್ಟುವಿಕೆ ಮತ್ತು ಚಿಕಿತ್ಸಕ ಶುಶ್ರೂಷಾ ಆರೈಕೆಯ ವಿಷಯದಲ್ಲಿ ಸಮಗ್ರ ಶುಶ್ರೂಷೆಯನ್ನು ಒದಗಿಸುವ ಗುರಿಯೊಂದಿಗೆ ಭಾರತದ ಗುಣಮಟ್ಟದ ಮಂಡಳಿಯು, ಆಸ್ಪತ್ರೆಗೆ ಬರುವ ಎಲ್ಲಾ ರೋಗಿಗಳಿಗೆ ಮತ್ತು ಸಮುದಾಯಕ್ಕೆ ಸಹಾನುಭೂತಿ, ಶ್ರೇಷ್ಟ ಸೌಕರ್ಯದೊಂದಿಗೆ ಸಮರ್ಥ ಮತ್ತು ನೈತಿಕ ಶುಶ್ರೂಷೆಗೆ ಈ ಪ್ರಶಸ್ತಿಯನ್ನು ಕೊಡಲಾಗುತ್ತದೆ.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

10 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

10 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

10 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

11 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

12 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

12 hours ago