ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಶುಶ್ರೂಷಾ (ನರ್ಸಿಂಗ್) ವಿಭಾಗಕ್ಕೆ ಶ್ರೇಷ್ಠತಾ (ಎಕ್ಸಲೆನ್ಸ್) ಪ್ರಮಾಣಪತ್ರವು ರಾಷ್ಟ್ರೀಯ ಆಸ್ಪತ್ರೆ ಮತ್ತು ಆರೋಗ್ಯ ಪೂರೈಕದಾರರ ಮಾನ್ಯತೆ ಪಡೆದ ಸಂಘ (ಎನ್ ಎ ಬಿ ಎಚ್), ಭಾರತೀಯ ಗುಣಮಟ್ಟದ ಮಂಡಳಿ (ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ) ಯಿಂದ ದೊರೆತಿದೆ. ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಮಣಿಪಾಲದ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಅವರು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ನರ್ಸಿಂಗ್ ಸೇವೆಗಳ ವಿಭಾಗದ ಮುಖ್ಯಸ್ಥರಾದ ಡಾ. ಶುಭ ಸೂರಿಯ ಇವರಿಗೆ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಸ್ತೂರ್ಬಾ ಆಸ್ಪತ್ರೆಯ ಮುಖ್ಯ ನಿರ್ವಹಣಾಧಿಕಾರಿಗಳಾದ ಸಿ ಜಿ ಮುತ್ತಣ, ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ,ಗುಣಮಟ್ಟ ಅನುಷ್ಠಾನದ ಸಲಹೆಗಾರರಾದ ಡಾ. ಸುನೀಲ್ ಸಿ ಮುಂಡ್ಕೂರ್ ಮತ್ತು ಜಿಬು ಥೋಮಸ್ ಉಪಸ್ಥಿತರಿದ್ದರು .
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಬಲ್ಲಾಳ್ ಅವರು, “ಎನ್ ಎ ಬಿ ಎಚ್ ನಿಂದ ಶುಶ್ರೂಷಾ ಶ್ರೇಷ್ಠತೆಗಾಗಿ ಗೌರವಿಸಲ್ಪಟ್ಟಿರುವುವುದು ಆಸ್ಪತ್ರೆಯ ನರ್ಸಿಂಗ್ ವಿಭಾಗದ ಗಣನೀಯ ಸಾಧನೆಯಾಗಿದೆ. ರೋಗಿಗಳಿಗೆ ಆರೈಕೆ ನೀಡುವಲ್ಲಿ ದಾದಿಯರು ನಿರ್ಣಾಯಕ ಪಾತ್ರ ವಹಿಸುತ್ತಿರುವುದರಿಂದ ಈ ಪ್ರಶಸ್ತಿಗೆ ಅವರು ಅರ್ಹರಾಗಿದ್ದಾರೆ” ಎಂದರು.
ರೋಗಿಗಳ ಆರೈಕೆ, ರೋಗಿಗಳ ಶಿಕ್ಷಣ ಮತ್ತು ಜಾಗೃತಿ, ಶುಶ್ರೂಷಾ ಸಂಪನ್ಮೂಲ ನಿರ್ವಹಣೆ, ಶುಶ್ರೂಷೆಯ ಗುಣಮಟ್ಟ, ಸಂವಹನ, ಮಾರ್ಗದರ್ಶನ ಮತ್ತು ಸೋಂಕು ನಿಯಂತ್ರಣ ಅಭ್ಯಾಸಗಳಂತಹ ಶುಶ್ರೂಷಾ ಆರೈಕಾ ವಿಭಾಗದ ಎಲ್ಲಾ ಕ್ಷೇತ್ರಗಳಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟವನ್ನು ಕಾಯ್ದುಕೊಳ್ಳುವ ಸೌಲಭ್ಯಗಳಿಗೆ ಪ್ರಮಾಣೀಕರಣವನ್ನು ನೀಡಲಾಗುತ್ತದೆ. ನರ್ಸಿಂಗ್ ಎಕ್ಸಲೆನ್ಸ್ ಎನ್ನುವುದು ಪ್ರತಿಷ್ಠಿತ ಪ್ರಮಾಣೀಕರಣ ಕಾರ್ಯಕ್ರಮವಾಗಿದ್ದು, ಆಸ್ಪತ್ರೆಗಳು ಮತ್ತು ಆರೋಗ್ಯ ರಕ್ಷಣೆಗಾಗಿ ರಾಷ್ಟ್ರೀಯ ಮಾನ್ಯತಾ ಮಂಡಳಿಯು ಅಭಿವೃದ್ಧಿಪಡಿಸಿದೆ ಮತ್ತು ಜಾರಿಗೆ ತಂದಿದೆ. ಆರೋಗ್ಯ ಉತ್ತೇಜನ, ರೋಗಗಳ ತಡೆಗಟ್ಟುವಿಕೆ ಮತ್ತು ಚಿಕಿತ್ಸಕ ಶುಶ್ರೂಷಾ ಆರೈಕೆಯ ವಿಷಯದಲ್ಲಿ ಸಮಗ್ರ ಶುಶ್ರೂಷೆಯನ್ನು ಒದಗಿಸುವ ಗುರಿಯೊಂದಿಗೆ ಭಾರತದ ಗುಣಮಟ್ಟದ ಮಂಡಳಿಯು, ಆಸ್ಪತ್ರೆಗೆ ಬರುವ ಎಲ್ಲಾ ರೋಗಿಗಳಿಗೆ ಮತ್ತು ಸಮುದಾಯಕ್ಕೆ ಸಹಾನುಭೂತಿ, ಶ್ರೇಷ್ಟ ಸೌಕರ್ಯದೊಂದಿಗೆ ಸಮರ್ಥ ಮತ್ತು ನೈತಿಕ ಶುಶ್ರೂಷೆಗೆ ಈ ಪ್ರಶಸ್ತಿಯನ್ನು ಕೊಡಲಾಗುತ್ತದೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…