Featured

ಮಣಿಪಾಲದಲ್ಲಿ ಮತ್ತೆ ಇ-ಸಿಗರೇಟ್ ಹಾವಳಿ ; ಮಾರಾಟ ಜಾಲ ಪತ್ತೆ – vishwanews24

ಮಣಿಪಾಲದಲ್ಲಿ ಮತ್ತೆ ಇ-ಸಿಗರೇಟ್ ಮಾರಾಟ ಜಾಲ ಪತ್ತೆ

ಮಣಿಪಾಲ: ಇ-ಸಿಗರೇಟ್ ಮಾರಾಟ ಮಾಡಲು ನಿಷೇಧ ಹೇರಲಾಗಿದೆ. ಆದಗ್ಯೂ ಮಣಿಪಾಲ ಭಾಗದಲ್ಲಿ ಮತ್ತೆ ಇ-ಸಿಗರೇಟ್ ಹಾವಳಿ ಹೆಚ್ಚಾಗಿ ಕಂಡು ಬರುತ್ತಿದೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯ ಬದಿ ಇರುವ ಅಂಗಡಿಯಲ್ಲಿ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಕಾಸರಗೋಡು ಮೂಲದ ಮೊಹಮ್ಮದ್ ಉನೈಶ್(25) ಹಾಗೂ ಸಾವಿರಾರು ರೂ.ಮೌಲ್ಯದ ಇ-ಸಿಗರೇಟ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದು ಆರೋಪಿಯನ್ನು ವಿಚಾರಣೆ ನಡೆಸಿದ ವೇಳೆ ಆತ ಮತ್ತೋರ್ವನೊಂದಿಗೆ ಸೇರಿಕೊಂಡು ಈ ವ್ಯವಹಾರ ಮಾಡುತ್ತಿರುವುದಾಗಿ ಹೇಳಿದ್ದಾನೆ.

ನಿಷೇಧಿತ ಇ-ಸಿಗರೇಟ್‌ಗಳನ್ನು ಮುಂಬೈಯಿಂದ ಖರೀದಿ ಮಾಡುತ್ತಿದ್ದರು. ಹೀಗೆ ಖರೀದಿಸಿದ ಇ-ಸಿಗರೇಟ್‌ಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಕೂಲ್ ಡ್ರಿಂಕ್ಸ್, ಪಫ್ಯೂರ್ಮ್, ಲೈಟರ್‌ಗಳಂತಹ ವಸ್ತುಗಳನ್ನು ಮುಂಬೈಯಿಂದ ಬಸ್ ಹಾಗೂ ರೈಲು ಮಾರ್ಗದ ಮೂಲಕ ಉಡುಪಿ ಜಿಲ್ಲೆಗೆ ತಂದು ಇಲ್ಲಿ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಇನ್ನು ಕೋವಿಡ್ ಸಮಯದಲ್ಲಿ ಮಣಿಪಾಲದ ವ್ಯಾಪ್ತಿಯ ಕೆಲವೊಂದು ಅಂಗಡಿಗಳಲ್ಲಿ ಇ-ಸಿಗರೇಟ್‌ಗಳನ್ನು ಹೆಚ್ಚಾಗಿ ಮಾರಾಟ ಮಾಡಲಾಗುತ್ತಿತ್ತು. ಈ ವೇಳೆ ಮಣಿಪಾಲ ಪೊಲೀಸರು ನಿರಂತರ ದಾಳಿ ನಡೆಸಿದ ಪರಿಣಾಮ ಇ-ಸಿಗರೇಟ್ ಮಾರಾಟ ಅಂಗಡಿಗಳಲ್ಲಿ ಇರಲಿಲ್ಲ. ಸದ್ಯ ಮತ್ತೆ ಇ-ಸಿಗರೇಟ್ ಮಾರಾಟ ಜಾಲ ಪತ್ತೆಯಾಗಿದ್ದು, ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

2 days ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

2 days ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

2 days ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

2 days ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

2 days ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

2 days ago