ಉಡುಪಿ : ಮಣಿಪಾಲದ ಕೆಎಂಸಿ ಆಸ್ಪತ್ರೆಯ ಆವರಣದಲ್ಲಿ ಬೃಹತ್ ಮರವೊಂದು ಏಕಾಏಕಿ ಉರುಳಿಬಿದ್ದಿದ್ದು, ಘಟನೆಯಲ್ಲಿ ಮರದಡಿ ವಿಶ್ರಾಂತಿ ಪಡೆಯುತ್ತಿದ್ದ ಇಬ್ಬರು ಗಾಯ ಗೊಂಡಿದ್ದಾರೆ. ಮರದಡಿ ನಿಲ್ಲಿಸಿದ್ದ 4 ಕಾರುಗಳು ಜಖಂಗೊಂಡಿವೆ.
ಉಡುಪಿಯಲ್ಲಿ ಮಳೆ ಗಾಳಿ ಇಲ್ಲದಿದ್ದರೂ ಕೆಎಂಸಿ ಆಸ್ಪತ್ರೆಯ ಆವರಣದಲ್ಲಿ ಈ ಬೃಹತ್ ಮರ ಉರುಳಿ ಬಿದ್ದಿದೆ. ಆಸ್ಪತ್ರೆಯ ಕಟ್ಟಡದ ಮೇಲೆ ಮರದ ಕೊಂಬೆಗಳು ಬಿದ್ದಿದ್ದು, ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ.
ಘಟನೆಯಲ್ಲಿ ಗಾಯಗೊಂಡಿದ್ದ ಇಬ್ಬರನ್ನು ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಅಧಿಕಾರಿಗಳು ದೌಡಾಯಿಸಿ ಮರ ಕತ್ತರಿಸಿ ಕಾರುಗಳನ್ನು ತೆರವುಗೊಳಿಸಿದ್ದಾರೆ.
ಕೆಲ ಬಾವಲಿಗಳಿಗೆ ಗಾಯವಾಗಿ ಬಿದ್ದಿದೆ. ಕೆಲ ಬಾವಲಿ ಮರಿಗಳ ರೆಕ್ಕೆಗೆ ಗಾಯವಾಗಿದೆ. ಯಾವಾಗಲು ಮರದ ಕೆಳಗೆ ತುಂಬಾ ಜನ ಕುಳಿತಿರುತ್ತಾರೆ. ಆದ್ರೆ ಇವತ್ತು ಕಡಿಮೆ ಜನ ಇದ್ರು. ಆವರಣದಲ್ಲೇ ಮರ ಬಿದ್ದ ಕಾರಣ ದೊಡ್ಡ ಅವಘಡ ತಪ್ಪಿದೆ, ರಸ್ತೆಗೆ ಬಿದ್ದಿದ್ದರೆ ಅನಾಹುತವಾಗುತ್ತಿತ್ತು ಅಂತ ಸ್ಥಳದಲ್ಲಿದ್ದ ಸರಳೇಬೆಟ್ಟು ಗಣೇಶ್ ರಾಜ್ ಆತಂಕ ವ್ಯಕ್ತಪಡಿಸಿದರು.
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…