ಮಣಿಪಾಲ : ವ್ಯಕ್ತಿಯೊಬ್ಬರು ಮನೆಯ ಮೊದಲ ಅಂತಸ್ತಿನ ಮೇಲ್ಬಾವಣೆಯ ಕಬ್ಬಿಣದ ಅಡ್ಡಪಟ್ಟಿಗೆ ನೇಣುಬೀಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ, 80 ಬಡಗುಬೆಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ನಡೆದಿದೆ.
ವ್ಯಕ್ತಿ ನೇಣು ಕುಣಿಕೆಯಲ್ಲಿ ನರಳಾಡುತ್ತಿದ್ದಾಗ, ದೇಹದ ಭಾರವು ನಿಯಂತ್ರಣ ಸಿಗದೆ, ಹಗ್ಗವು ತುಂಡಾದ ಪರಿಣಾಮ, ವ್ಯಕ್ತಿ 20 ಅಡಿಗಿಂತಲೂ ಅಧಿಕ ಎತ್ತರದಿಂದ ಮನೆಯ ಹೊರಾಂಗಳದಲ್ಲಿ ಬಿದ್ದಿದ್ದಾರೆ. ತಲೆ ಭಾಗಕ್ಕಾದ ಗಂಭೀರ ಸ್ವರೂಪದ ಗಾಯದಿಂದ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯನ್ನು ಮೆಟ್ರಾಯ್ (55ವ) ತಂದೆ ಎಫ್.ಜೆ.ಎ. ಫೆರ್ನಾಂಡಿಸ್ ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿದ್ದು ಮಣಿಪಾಲ ಪೋಲಿಸ್ ಠಾಣೆಯ ಪಿ.ಎಸ್.ಐ ಅನಿಲ್ ಕುಮಾರ್, ಎ.ಎಸ್.ಐ ನಾಗೇಶ್ ನಾಯ್ಕ, ಸಿಬ್ಬಂದಿ ವಿದ್ಯಾ ಕಾನೂನು ಪ್ರಕ್ರಿಯೆ ನಡೆಸಿದರು. ವಿಧಿ ವಿಜ್ಞಾನ ತಜ್ಞರಾದ ಪ್ರಸನ್ನ, ಲಾವಣ್ಯ, ಹರೀಶ್ ಪರಿಶೀಲಿಸಿದರು. ಶವವನ್ನು ಮಣಿಪಾಲ ಆಸ್ಪತ್ರೆಯ ವೈದಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡುವರು ಇಲಾಖೆಗೆ ನೆರವಾದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…