ಮಣಿಪಾಲ : ಹೆರ್ಗಾ ಗ್ರಾಮದ ಈಶ್ವರ ನಗರದ ನಿವಾಸಿ ಎಂ.ಐ.ಟಿಯ ತೆಲಂಗಾಣ ಮೂಲದ ವಿದ್ಯಾರ್ಥಿಯೊಬ್ಬರು ಮಾ.1 ರಿಂದ ನಾಪತ್ತೆಯಾಗಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ.
ತೆಲಂಗಾಣ ಇಬ್ರಾಹಿಮ್ ನಗರದ ನಿವಾಸಿ ಆದಿತ್ಯ ಪಾಂಡೆ (20) ನಾಪತ್ತೆಯಾಗಿರುವವರು.
ಮಣಿಪಾಲದ ಹೆರ್ಗಾ ಗ್ರಾಮದ ಈಶ್ವರ ನಗರದಲ್ಲಿರುವ ಪವಿತ್ರ ರೆಸಿಡೆನ್ಸಿಯಲ್ಲಿ ವಾಸವಾಗಿದ್ದ ಅದಿತ್ಯ ಪಾಂಡೆ ಅವರು ಎಂ ಐ ಟಿ ಕಾಲೇಜಿನಲ್ಲಿ 3 ನೇ ವರ್ಷದ ವ್ಯಾಸಾಂಗ ಮಾಡುತ್ತಿದ್ದರು. ಇವರಿಗೆ ಮೊಬೈಲ್ ನಲ್ಲಿ ಆನ್ ಲೈನ್ ಆಟ ಆಡುವ ಅಭ್ಯಾಸವಿದ್ದು ಇದೇ ವಿಷಯದಲ್ಲಿ ಮಾನಸಿಕ ಕಿನ್ನತೆಗೊಳಗಾಗಿದ್ದರು. ಮಾ.1 ರಂದು ರಾತ್ರಿ 10.45 ರ ಸುಮಾರಿಗೆ ತನ್ನ ರೂಮಿನಿಂದ ಹೊರಗೆ ಹೋಗಿದ್ದ ಅವರು, ಈ ವೆರೆಗೂ ವಾಪಾಸು ಬಾರದೇ ಕಾಣೆಯಾಗಿದ್ದಾರೆ. ಆದಿತ್ಯ ಪಾಂಡೆರವರ ಬಗ್ಗೆ ಸಂಬಂದಿಕರ ಮತ್ತು ಸ್ನೇಹಿತರ ಮನೆಯಲ್ಲಿ ವಿಚಾರಿಸಿ ಹುಡುಕಾಡಿದರೂ ಎಲ್ಲೂ ಈ ತನಕ ಪತ್ತೆಯಾಗಿರುವುದಿಲ್ಲ ಎಂಬುದಾಗಿ ಆದಿತ್ಯ ಅವರ ತಮ್ಮ ಕೃಷ್ಣ ಪಾಂಡೆ ಎಂಬವರು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…