ಮಣಿಪಾಲ : ಹೆರ್ಗಾ ಗ್ರಾಮದ ಈಶ್ವರ ನಗರದ ನಿವಾಸಿ ಎಂ.ಐ.ಟಿಯ ತೆಲಂಗಾಣ ಮೂಲದ ವಿದ್ಯಾರ್ಥಿಯೊಬ್ಬರು ಮಾ.1 ರಿಂದ ನಾಪತ್ತೆಯಾಗಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ.
ತೆಲಂಗಾಣ ಇಬ್ರಾಹಿಮ್ ನಗರದ ನಿವಾಸಿ ಆದಿತ್ಯ ಪಾಂಡೆ (20) ನಾಪತ್ತೆಯಾಗಿರುವವರು.
ಮಣಿಪಾಲದ ಹೆರ್ಗಾ ಗ್ರಾಮದ ಈಶ್ವರ ನಗರದಲ್ಲಿರುವ ಪವಿತ್ರ ರೆಸಿಡೆನ್ಸಿಯಲ್ಲಿ ವಾಸವಾಗಿದ್ದ ಅದಿತ್ಯ ಪಾಂಡೆ ಅವರು ಎಂ ಐ ಟಿ ಕಾಲೇಜಿನಲ್ಲಿ 3 ನೇ ವರ್ಷದ ವ್ಯಾಸಾಂಗ ಮಾಡುತ್ತಿದ್ದರು. ಇವರಿಗೆ ಮೊಬೈಲ್ ನಲ್ಲಿ ಆನ್ ಲೈನ್ ಆಟ ಆಡುವ ಅಭ್ಯಾಸವಿದ್ದು ಇದೇ ವಿಷಯದಲ್ಲಿ ಮಾನಸಿಕ ಕಿನ್ನತೆಗೊಳಗಾಗಿದ್ದರು. ಮಾ.1 ರಂದು ರಾತ್ರಿ 10.45 ರ ಸುಮಾರಿಗೆ ತನ್ನ ರೂಮಿನಿಂದ ಹೊರಗೆ ಹೋಗಿದ್ದ ಅವರು, ಈ ವೆರೆಗೂ ವಾಪಾಸು ಬಾರದೇ ಕಾಣೆಯಾಗಿದ್ದಾರೆ. ಆದಿತ್ಯ ಪಾಂಡೆರವರ ಬಗ್ಗೆ ಸಂಬಂದಿಕರ ಮತ್ತು ಸ್ನೇಹಿತರ ಮನೆಯಲ್ಲಿ ವಿಚಾರಿಸಿ ಹುಡುಕಾಡಿದರೂ ಎಲ್ಲೂ ಈ ತನಕ ಪತ್ತೆಯಾಗಿರುವುದಿಲ್ಲ ಎಂಬುದಾಗಿ ಆದಿತ್ಯ ಅವರ ತಮ್ಮ ಕೃಷ್ಣ ಪಾಂಡೆ ಎಂಬವರು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…