Featured

ಮಣಿಪಾಲ: ಎರಡು ಅಂಗಡಿಗಳಿಗೆ ನುಗ್ಗಿ ನಗದು ಸಹಿತ ಇತರ ಸೊತ್ತು ಕಳ್ಳತನ: ಮೂವರ ಬಂಧನ – vishwanews24

ಮಣಿಪಾಲ: ಎರಡು ಅಂಗಡಿಗಳಿಗೆ ನುಗ್ಗಿ ನಗದು ಸಹಿತ ಇತರ ಸೊತ್ತು ಕಳ್ಳತನ: ಮೂವರ ಬಂಧನ

ಮಣಿಪಾಲ: ಮಣಿಪಾಲ ಠಾಣೆ ವ್ಯಾಪ್ತಿಯ ಎರಡು ಅಂಗಡಿಗಳಿಗೆ ನುಗ್ಗಿ ನಗದು ಸಹಿತ ಇತರ ಸೊತ್ತುಗಳನ್ನು ದೋಚಿದ್ದ ಕಳ್ಳರನ್ನು ಪೊಲೀಸರು ನ. 6ರಂದು ಮಣಿಪಾಲ ಶೀಂಬ್ರ ಸೇತುವೆಯ ಬಳಿ ಬಂಧಿಸಿದ್ದಾರೆ.

ಕೊಪ್ಪಳ ಗಜೇಂದ್ರಗಢದ ಮಂಜುನಾಥ್ ಚಿದಾನಂದಪ್ಪ ನರತೆಲಿ (24), ಹಟ್ಟಿಯಂಗಡಿಯ ಪ್ರಸಾದ್ (22) ಮತ್ತು ಕಿಶನ್(20) ಬಂಧಿತರು.

ಅವರು ಕೃತ್ಯಕ್ಕೆ ಬಳಸಿದ್ದ ಇನ್ನೋವಾ ಕಾರನ್ನು ವಶಕ್ಕೆ ಪಡೆಯಲಾಗಿದೆ. ಮಣಿಪಾಲ ಪಿಐ ಟಿ.ವಿ. ದೇವರಾಜ್ ನೇತೃತ್ವದಲ್ಲಿ ಎಸ್ಸೆ„ ಅಕ್ಷಯಾ ಕುಮಾರಿ, ಎಎಸ್ಐ ವಿವೇಕಾನಂದ, ಪ್ರಸನ್ನ ಕುಮಾರ್, ಇಮ್ರಾನ್, ರಘು ಹಾಗೂ ಮಂಜುನಾಥ್ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಮಣಿಪಾಲದ ಅನಂತನಗರ ದಲ್ಲಿರುವ ಕೊಡವೂರಿನ ಪ್ರಜ್ವಲ್ ಅವರ ಬೇಕರಿಗೆ ಅ. 31ರಂದು ರಾತ್ರಿ ಶೆಟರ್ ಮುರಿದು ಕ್ಯಾಶ್ ಬಾಕ್ಸ್ನಲ್ಲಿಟ್ಟಿದ್ದ 30 ಸಾವಿರ ರೂ. ಹಾಗೂ ಕ್ಯಾಶ್ ಡ್ರಾವರ್ನಲ್ಲಿ ಇರಿಸಿದ್ದ 2 ಸಾವಿರ ರೂ.ಗಳನ್ನು ಆರೋಪಿಗಳು ಕಳವು ಮಾಡಿದ್ದರು. ಇನ್ನೊಂದು ಪ್ರಕರಣದಲ್ಲಿ ಮಣಿಪಾಲ ಈಶ್ವರನಗರದ ಜನರಲ್ ಸ್ಟೋರ್ಗೆ ನುಗ್ಗಿದ್ದ ಆರೋಪಿತರು ಸಾವಿರಾರು ರೂ. ನಗದು ಹಾಗೂ ದಾಖಲೆಪತ್ರಗಳನ್ನು ಕಳ್ಳತನ ಮಾಡಿದ್ದರು. ಈಶ್ವರನಗರದ ರೀಗಲ್ ಎಂಬಸಿ ಅಪಾರ್ಟ್ಮೆಂಟ್ನ ನೆಲ ಅಂತಸ್ತಿನಲ್ಲಿ ರಾಘವೇಂದ್ರ ಅವರು ಆದಿಶಕ್ತಿ ಜನರಲ್ ಸ್ಟೋರ್ ಇಟ್ಟುಕೊಂಡಿದ್ದರು.

ಅ. 31ರ ರಾತ್ರಿ ಕಳ್ಳರು ಅಂಗಡಿಯ ಶೆಟರ್ ಮುರಿದು ಒಳಗೆ ಹೋಗಿ ಕ್ಯಾಶ್ ಡ್ರಾವರ್ನಲ್ಲಿರಿಸಿದ್ದ 30 ಸಾವಿರ ರೂ. ನಗದು ಹಾಗೂ ಅವರ ವೋಟರ್ ಐಡಿ, ಆರ್ಸಿ, ಡಿಎಲ್ ಮತ್ತು ಎಟಿಎಂ ಕಾರ್ಡ್ ಇರುವ ಪರ್ಸ್ ಕಳವು ಮಾಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ಕೈಗೆತ್ತಿಕೊಂಡ ಮಣಿಪಾಲ ಪೊಲೀಸರಿಗೆ ಎರಡೂ ಪ್ರಕರಣದಲ್ಲಿ ಆರೋಪಿಗಳು ಕಾರಿನಲ್ಲಿ ಬಂದಿದ್ದು ಗೊತ್ತಾಗಿತ್ತು. ಈ ಜಾಡು ಹಿಡಿದು ಹೊರಟ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago