ಮಣಿಪಾಲ: ಇಲ್ಲಿನ ಸ್ಥಳೀಯ ಶಾಲೆಯಲ್ಲಿ ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಬೀದಿ ನಾಯಿಗಳ ಗುಂಪೊಂದು ಮೈಮೇಲೆ ಎರಗಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಆ. 24ರ ಬುಧವಾರ ನಡೆದಿದೆ.
ನಾಯಿಗಳ ದಾಳಿಯಿಂದ ಬಾಲಕಿಯ ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ವಿಷಯ ತಿಳಿದು ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ನ್ಯಾಯಾಧೀಶೆ ಶರ್ಮಿಳಾ ಎಸ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಆರೋಗ್ಯ ವಿಚಾರಿಸಿದ್ದಾರೆ.
“ಇತೀಚಿನ ದಿನಗಳಲ್ಲಿ ಬೀದಿ ನಾಯಿಗಳ ಸಂಖ್ಯೆ ನಗರದಲ್ಲಿ ಬಹಳವಾಗಿ ಹೆಚ್ಚಳ ಕಂಡಿದೆ. ಹಿರಿಯ ನಾಗರಿಕರು, ಚಿಕ್ಕಮಕ್ಕಳು, ಶಾಲಾ ವಿದ್ಯಾರ್ಥಿಗಳ ತಿರುಗಾಟಕ್ಕೂ ಭೀತಿ ಎದುರಾಗಿದೆ. ಸಾರ್ವಜನಿಕರ ಮೇಲೆ ದಾಳಿ ನಡೆಸಿರುವ ಪ್ರಕರಣಗಳು ಬಹಳಷ್ಟು ನಡೆದಿವೆ. ಸಮಸ್ಯೆಯ ಮುಕ್ತಿಗಾಗಿ ನಗರಸಭೆ ತಕ್ಷಣವಾಗಿ ನಗರದಲ್ಲಿ ನೆಲೆ ಕಂಡಿರುವ ನೂರಾರು ಬೀದಿ ನಾಯಿಗಳನ್ನು ಸೆರೆ ಹಿಡಿದು, ಶ್ವಾನ ಪುರ್ನವಸತಿ ಕೇಂದ್ರಗಳಲ್ಲಿ ದಾಖಲಿಸುವಂತೆ” ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ಅವರು ಆಗ್ರಹಪಡಿಸಿದ್ದಾರೆ.
ಹೆಚ್ಚು ಮದ್ಯಪಾನ ಮಾಡುವಂತೆ ಯುವಜನರಿಗೆ ಜಪಾನ್ ಮನವಿ ..
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…