Featured

ಮಣಿಪಾಲ: ಕಟ್ಟಡ ಕಾಮಗಾರಿ ವೇಳೆ ನಾಲ್ಕನೆ ಮಹಡಿಯಿಂದ ಬಿದ್ದು ಕಾರ್ಮಿಕ  ಮೃತ್ಯು – vishwanews24

ಮಣಿಪಾಲ: ಕಟ್ಟಡ ಕಾಮಗಾರಿ ವೇಳೆ ನಾಲ್ಕನೆ ಮಹಡಿಯಿಂದ ಬಿದ್ದು ಕಾರ್ಮಿಕ  ಮೃತ್ಯು

ಮಣಿಪಾಲ: ಕಟ್ಟಡ ಕಾಮಗಾರಿ ವೇಳೆ ನಾಲ್ಕನೆ ಮಹಡಿಯಿಂದ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಮೇ 23ರಂದು ಸಂಜೆ ವೇಳೆ ಮಣಿಪಾಲ ಈಶ್ವರನಗರ ಎಂಬಲ್ಲಿ ನಡೆದಿದೆ.

ಮೃತರನ್ನು ಕುಕ್ಕೆಹಳ್ಳಿ ಗ್ರಾಮದ ರಘುರಾಮ ಕುಲಾಲ್(50) ಎಂದು ಗುರುತಿಸಲಾಗಿದೆ. ಮಣಿಪಾಲದ ಈಶ್ವರದ ನಗರದ ಕಟ್ಟಡ ಕಾಮಗಾರಿ ಕೆಲಸ ನಡೆಯುತ್ತಿದ್ದು, ಒಂದು ತಿಂಗಳಿನಿಂದ ಹತ್ತು ಮಂದಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಮೃತ ರಘು ರಾಮ್ ಸಹೋದರ ಪದ್ಮನಾಭ ಅವರೂ ಈ ತಂಡದಲ್ಲಿದ್ದರು ರಘು ರಾಮ್ ಅವರು ಮಹಡಿಯ ಹೊರಭಾಗದ ಗಾರೆ ಕೆಲಸ ಮಾಡುತ್ತಿದ್ದರು.

ಕೆಲಸ ಮಾಡುತ್ತಿದ್ದ ವೇಳೆ ಬಕೆಟ್ ತರಲು ಕಟ್ಟಡದ ಹೊರಮೈಯ ಪ್ಯಾರಾಪೀಟ್ ಮೇಲೆ ಕಾಲು ಇಟ್ಟಿದ್ದರು. ಈ ವೇಳೆ ಅವರು ಕಾಲು ಜಾರಿ ಕೆಳಕ್ಕೆ ೫೦ ಅಡಿ ಆಳಕ್ಕೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.

ಕಟ್ಟಡದ ಮಾಲಕ ಗಣೇಶ ಮತ್ತು ಕಟ್ಟಡದ ಗುತ್ತಿಗೆದಾರ ಅಮರೇಶ ಕಟ್ಟಡದ ಗಾರೆ ಕೆಲಸ ಮಾಡುವ ವೇಳೆ ಮುಂಜಾಗೃತ ದೃಷ್ಠಿಯಿಂದ ಯಾವುದೇ ಸುರಕ್ಷತಾ ಸಾಧನಗಳನ್ನು ಅಳವಡಿಸದೇ ಇದ್ದುದರಿಂದ ಈ ಘಟನೆ ನಡೆದಿದೆ ಎಂದು ದೂರಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

12 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

12 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago