ಮಣಿಪಾಲ: ಕಾರಿನ ಮೇಲೆ ಪಟಾಕಿಯನ್ನು ಇಟ್ಟು ಸಿಡಿಸಿದ ವ್ಯಕ್ತಿಯ ವಿರುದ್ದ ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಣಿಪಾಲ ವಿಪಿ ನಗರದ ಸೆಲೂನ್ ನಲ್ಲಿ ಕೆಲಸ ಮಾಡಿಕೊಂಡಿರುವ ವಿಶಾಲ್ ಕೊಹ್ಲಿ (26) ಎಂಬಾತನ ಮೇಲೆ ಪ್ರಕರಣ ದಾಖಲಾಗಿದೆ.
ಅಕ್ಟೋಬರ್ 25ರಂದು ರಾತ್ರಿ 9.30 ರ ಹೊತ್ತಿಗೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಳ್ಳಿ ಡಾ. ವಿ ಎಸ್ ಆಚಾರ್ಯ ರಸ್ತೆಯಲ್ಲಿ ಕಾರು ನಂಬ್ರ ಕೆ.ಎ20 9232 ರಲ್ಲಿ ವಿಶಾಲ್ ಕಾರನ್ನು ನಿರ್ಲಕ್ಷ್ಯತನ, ಅಜಾಗರುಕತೆ ಹಾಗೂ ಅಪಾಯಕಾರಿ ರೀತಿಯಲ್ಲಿ ಚಲಾಯಿಸಿ ಕಾರಿನ ಮೇಲ್ಗಡೆ ಪಟಾಕಿ ಇಟ್ಟು ಸಿಡಿಸಿ ಮನುಷ್ಯನ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ಕೃತ್ಯ ಎಸಗಿದ್ದು, ಈ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗಿದ್ದವು.
ನೇರ ನುಡಿಗಳಿಂದ ಶತ್ರುಗಳ ಹೆಚ್ಚಳ.. ನೋಡಿ ಇಂದಿನ ದಿನ ಭವಿಷ್ಯ – Vishwanews24
ಈ ಕೃತ್ಯದಲ್ಲಿ ಭಾಗಿಯಾದ ಆರೋಪಿ ಮತ್ತು ವಾಹನ ಪತ್ತೆಗೆ ಅಕ್ಷಯ್ ಎಂ ಹಾಕೆ ಎಸ್ಪಿ ಉಡುಪಿ ಅವರ ಮಾರ್ಗದರ್ಶನದಲ್ಲಿ ಮಣಿಪಾಲ ಪೊಲೀಸ್ ಠಾಣಾ ಪಿ ಎಸ್ ಐ ರಾಜಶೇಖರ ವಂದಲಿ, ಶೈಲೇಶ್ ಎ ಎಸ್ ಐ ಮತ್ತು ಹೆಡ್ ಕಾನ್ಸ್ಟೇಬಲ್ ಪ್ರಸನ್ನ ಅವರು ಅಕ್ಟೋಬರ್ 27ರಂದು ಆರೋಪಿಯನ್ನು ಕಾರು ಸಮೇತ ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…