ಮಣಿಪಾಲ: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಣಿಪಾಲದ ಎಂಐಟಿ ವಿದ್ಯಾರ್ಥಿಯೋರ್ವ ಮೃತಪಟ್ಟು ಇನ್ನಿಬ್ಬರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಮಣಿಪಾಲದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಎಂಐಟಿ ವಿದ್ಯಾರ್ಥಿ ನಿಖಿಲ್ (23) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗ ಮೂಲದವರಾಗಿದ್ದು, ಮಣಿಪಾಲದಲ್ಲಿ ವ್ಯಾಸಂಗ ಮಾಡಿಕೊಂಡಿದ್ದರು.
ಮಹೇಂದ್ರ ಜಿ.ಅವರು ಶುಕ್ರವಾರ ತನ್ನ ಸ್ನೇಹಿತರಾದ ನಿಹಾಲ್ ಮತ್ತು ನಿಖಿಲ್ ಅವರೊಂದಿಗೆ ಬೈಕ್ನಲ್ಲಿ ಕೆಳ ಪರ್ಕಳ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದು, ಬೈಕನ್ನು ನಿಹಾಲ್ ಚಲಾಯಿಸುತ್ತಿದ್ದರು ಎನ್ನಲಾಗಿದೆ.
ಮಹೇಂದ್ರ ಅವರ ಸ್ನೇಹಿತ ನಿಖಿಲ್ ಮಧ್ಯದಲ್ಲಿ ಮತ್ತು ಮಹೇಂದ್ರ ಅವರು ನಿಖಿಲ್ ನ ಹಿಂಬದಿಯಲ್ಲಿ ಕುಳಿತುಕೊಂಡಿದ್ದರು. ಬೈಕ್ ಮಣಿಪಾಲದ ಟೈಗರ್ ಸರ್ಕಲ್ನ ಸ್ವಲ್ಪ ಮುಂದೆ ತಲುಪಿದಾಗ ಆರೋಪಿ ನಿಹಾಲ್ ಬೈಕ್ ಅನ್ನು ಅತೀ ವೇಗದಿಂದ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದಿದೆ.
ಈ ವೇಳೆ ಮೂರೂ ಮಂದಿ ಬೈಕ್ನಿಂದ ಕೆಳಗೆ ಬಿದ್ದಿದ್ದಾರೆ. ನಿಖಿಲ್ ನ ತಲೆಯ ಹಿಂಭಾಗಕ್ಕೆ ಗಂಭೀರ ಗಾಯವಾಗಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಉಳಿದ ಇಬ್ಬರಿಗೂ ಗಾಯ ಉಂಟಾಗಿತ್ತು. ಸ್ಥಳೀಯರು ಗಾಯಾಳುಗಳನ್ನು ಆಯಂಬುಲೆನ್ಸ್ನಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು.
ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…