ಮಣಿಪಾಲ: ನಡುರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಯುವಕನ ಹುಚ್ಚಾಟ : ಪ್ರಕರಣ ದಾಖಲು – Vishwanews24

Featured, ಉಡುಪಿ

ಮಣಿಪಾಲ: ನಡುರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಯುವಕನ ಹುಚ್ಚಾಟ : ಪ್ರಕರಣ ದಾಖಲು

ಮಣಿಪಾಲ: ಯೌವನದಲ್ಲಿ ಹುಚ್ಚು ಮನಸ್ಸು ಏನೇನೋ ಸಾಹಸಕ್ಕೆ ಪ್ರೇರಣೆ ನೀಡುತ್ತಿದೆ. ಆದರೆ ಸ್ವಲ್ಪ ಎಡವಿದರೂ ಜೀವಕ್ಕೆ ಆಪತ್ತು ನಿಶ್ಚಿತ. ಇಂತಹುದೇ ಅತಿರೇಕದ ಸಾಹಸಕ್ಕೆ ಮುಂದಾಗಿ ಬೈಕ್ ಸ್ಟಂಟ್ ಮಾಡ ಹೊರಟ ಯುವಕನೋರ್ವ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ.

ದ್ವಿಚಕ್ರ ವಾಹನದಲ್ಲಿ ಯುವಕನೋರ್ವ ಹುಚ್ಚಾಟ ನಡೆಸಿದ್ದು ಸ್ಕೂಟಿಯನ್ನು ಯದ್ವಾತದ್ವಾ ಓಡಿಸಿ ರೀಲ್ಸ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯಲ್ಲಿ ಯುವಕನೋರ್ವ ಸ್ಕೂಟಿಯನ್ನು ಯದ್ವಾತದ್ವಾ ಓಡಿಸಿ ಅದನ್ನು ತನ್ನ ಮೊಬೈಲ್ ನಲ್ಲಿ ರೀಲ್ಸ್ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಕೊಂಡಿದ್ದಾನೆ.

ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಅಲಹಬಾದ್ ಹೈಕೋರ್ಟ್‌ ‘ಗ್ರೀನ್‌ ಸಿಗ್ನಲ್‌’ – Vishwanews24

ಯುವಕನ ಹುಚ್ಚಾಟದ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಪರೀತವಾದ ಆಕ್ರೋಶ ವ್ಯಕ್ತವಾಗಿದ್ದು ಸ್ಕೂಟಿಯಲ್ಲಿ ಉಡುಪಿ ರಿಜಿಸ್ಟ್ರೇಶನ್ ನಂಬರ್ ಪ್ಲೇಟ್ ಇರುವುದು ಕಂಡು ಬಂದಿದ್ದು ಯುವಕನ ಸ್ಕೂಟಿಯ ಸ್ಟಂಟ್ ನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಣಿಪಾಲ ಪೊಲೀಸರ ಮೂಲಕ ಯುವಕನ ಗುರುತನ್ನು ಪತ್ತೆ ಹಚ್ಚಿದ್ದಾರೆ.

ಯುವಕನನ್ನು ಪರ್ಕಳ ನಿವಾಸಿ ಅಬೂಬಕ್ಕರ್ ಪುತ್ರ ಆಶಿಕ್ ಎಂದು ಗುರುತಿಸಲಾಗಿದೆ.

ಯುವಕನ ವಿರುದ್ದ ದ್ವಿಚಕ್ರ ವಾಹನ ಸ್ಟಂಟ್ ಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೋದಿ ಉಪನಾಮ ಪ್ರಕರಣ : ನಾನು ತಪ್ಪಿಸ್ಥನಲ್ಲ ಹಾಗಾಗಿ ಕ್ಷಮೆಯಾಚಿಸುವುದಿಲ್ಲ : ರಾಹುಲ್‌ ಗಾಂಧಿ – Vishwanews24

Leave a Reply