ಮಣಿಪಾಲ: ಯೌವನದಲ್ಲಿ ಹುಚ್ಚು ಮನಸ್ಸು ಏನೇನೋ ಸಾಹಸಕ್ಕೆ ಪ್ರೇರಣೆ ನೀಡುತ್ತಿದೆ. ಆದರೆ ಸ್ವಲ್ಪ ಎಡವಿದರೂ ಜೀವಕ್ಕೆ ಆಪತ್ತು ನಿಶ್ಚಿತ. ಇಂತಹುದೇ ಅತಿರೇಕದ ಸಾಹಸಕ್ಕೆ ಮುಂದಾಗಿ ಬೈಕ್ ಸ್ಟಂಟ್ ಮಾಡ ಹೊರಟ ಯುವಕನೋರ್ವ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ.
ದ್ವಿಚಕ್ರ ವಾಹನದಲ್ಲಿ ಯುವಕನೋರ್ವ ಹುಚ್ಚಾಟ ನಡೆಸಿದ್ದು ಸ್ಕೂಟಿಯನ್ನು ಯದ್ವಾತದ್ವಾ ಓಡಿಸಿ ರೀಲ್ಸ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯಲ್ಲಿ ಯುವಕನೋರ್ವ ಸ್ಕೂಟಿಯನ್ನು ಯದ್ವಾತದ್ವಾ ಓಡಿಸಿ ಅದನ್ನು ತನ್ನ ಮೊಬೈಲ್ ನಲ್ಲಿ ರೀಲ್ಸ್ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಕೊಂಡಿದ್ದಾನೆ.
ಯುವಕನ ಹುಚ್ಚಾಟದ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಪರೀತವಾದ ಆಕ್ರೋಶ ವ್ಯಕ್ತವಾಗಿದ್ದು ಸ್ಕೂಟಿಯಲ್ಲಿ ಉಡುಪಿ ರಿಜಿಸ್ಟ್ರೇಶನ್ ನಂಬರ್ ಪ್ಲೇಟ್ ಇರುವುದು ಕಂಡು ಬಂದಿದ್ದು ಯುವಕನ ಸ್ಕೂಟಿಯ ಸ್ಟಂಟ್ ನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಣಿಪಾಲ ಪೊಲೀಸರ ಮೂಲಕ ಯುವಕನ ಗುರುತನ್ನು ಪತ್ತೆ ಹಚ್ಚಿದ್ದಾರೆ.
ಯುವಕನನ್ನು ಪರ್ಕಳ ನಿವಾಸಿ ಅಬೂಬಕ್ಕರ್ ಪುತ್ರ ಆಶಿಕ್ ಎಂದು ಗುರುತಿಸಲಾಗಿದೆ.
ಯುವಕನ ವಿರುದ್ದ ದ್ವಿಚಕ್ರ ವಾಹನ ಸ್ಟಂಟ್ ಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…