ಮಣಿಪಾಲ: ಯೌವನದಲ್ಲಿ ಹುಚ್ಚು ಮನಸ್ಸು ಏನೇನೋ ಸಾಹಸಕ್ಕೆ ಪ್ರೇರಣೆ ನೀಡುತ್ತಿದೆ. ಆದರೆ ಸ್ವಲ್ಪ ಎಡವಿದರೂ ಜೀವಕ್ಕೆ ಆಪತ್ತು ನಿಶ್ಚಿತ. ಇಂತಹುದೇ ಅತಿರೇಕದ ಸಾಹಸಕ್ಕೆ ಮುಂದಾಗಿ ಬೈಕ್ ಸ್ಟಂಟ್ ಮಾಡ ಹೊರಟ ಯುವಕನೋರ್ವ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ.
ದ್ವಿಚಕ್ರ ವಾಹನದಲ್ಲಿ ಯುವಕನೋರ್ವ ಹುಚ್ಚಾಟ ನಡೆಸಿದ್ದು ಸ್ಕೂಟಿಯನ್ನು ಯದ್ವಾತದ್ವಾ ಓಡಿಸಿ ರೀಲ್ಸ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯಲ್ಲಿ ಯುವಕನೋರ್ವ ಸ್ಕೂಟಿಯನ್ನು ಯದ್ವಾತದ್ವಾ ಓಡಿಸಿ ಅದನ್ನು ತನ್ನ ಮೊಬೈಲ್ ನಲ್ಲಿ ರೀಲ್ಸ್ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಕೊಂಡಿದ್ದಾನೆ.
ಯುವಕನ ಹುಚ್ಚಾಟದ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಪರೀತವಾದ ಆಕ್ರೋಶ ವ್ಯಕ್ತವಾಗಿದ್ದು ಸ್ಕೂಟಿಯಲ್ಲಿ ಉಡುಪಿ ರಿಜಿಸ್ಟ್ರೇಶನ್ ನಂಬರ್ ಪ್ಲೇಟ್ ಇರುವುದು ಕಂಡು ಬಂದಿದ್ದು ಯುವಕನ ಸ್ಕೂಟಿಯ ಸ್ಟಂಟ್ ನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಣಿಪಾಲ ಪೊಲೀಸರ ಮೂಲಕ ಯುವಕನ ಗುರುತನ್ನು ಪತ್ತೆ ಹಚ್ಚಿದ್ದಾರೆ.
ಯುವಕನನ್ನು ಪರ್ಕಳ ನಿವಾಸಿ ಅಬೂಬಕ್ಕರ್ ಪುತ್ರ ಆಶಿಕ್ ಎಂದು ಗುರುತಿಸಲಾಗಿದೆ.
ಯುವಕನ ವಿರುದ್ದ ದ್ವಿಚಕ್ರ ವಾಹನ ಸ್ಟಂಟ್ ಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…