Featured

ಮಣಿಪಾಲ : ನಡು ರಸ್ತೆಯಲ್ಲೇ ಜೋಡಿಗಳ ಅಸಭ್ಯ ವರ್ತನೆ ; ಸಾರ್ವಜನಿಕರ ಆಕ್ರೋಶ – vishwanews24

ಮಣಿಪಾಲ : ನಡು ರಸ್ತೆಯಲ್ಲೇ ಜೋಡಿಗಳ ಅಸಭ್ಯ ವರ್ತನೆ ; ಸ್ಥಳೀಯರಲ್ಲಿ ಆಕ್ರೋಶ – ವಿಡಿಯೋ ವೈರಲ್..!

ಉಡುಪಿ: ಉಡುಪಿಯ ಮಣಿಪಾಲ ನಗರದಲ್ಲಿ ತಡರಾತ್ರಿ ಯುವಕ-ಯುವತಿಯೊಬ್ಬರ ಅಸಭ್ಯ ವರ್ತನೆ ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಸಾರ್ವಜನಿಕ ರಸ್ತೆಯಲ್ಲೇ ಪ್ರಣಯ ಸಲ್ಲಾಪಕ್ಕೆ ಇಳಿದ ಜೋಡಿ, ಸುತ್ತಮುತ್ತಲಿನ ಜನರಲ್ಲಿ ಅಸಹಜ ಪರಿಸ್ಥಿತಿಯನ್ನು ಉಂಟುಮಾಡಿದ ಘಟನೆ ವರದಿಯಾಗಿದೆ.

ಸ್ಥಳೀಯರ ಪ್ರಕಾರ, ಜೋಡಿ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿರುವುದನ್ನು ಕಂಡು ಕೆಲವರು ತರಾಟೆಗೆ ತೆಗೆದುಕೊಂಡರು. ವಿದೇಶಗಳಲ್ಲಿ ಕಾಣಿಸಿಕೊಳ್ಳುವ ರೀತಿಯ ವರ್ತನೆಯನ್ನು ಅನುಸರಿಸುತ್ತಿರುವಂತೆ ಕಂಡ ಈ ಘಟನೆ, ಸ್ಥಳೀಯರಲ್ಲಿ ಆಕ್ರೋಶ ಹುಟ್ಟಿಸಿದೆ.

ಇದನ್ನೂ ಓದಿ:

ಮಣಿಪಾಲವು ಗುಣಮಟ್ಟದ ಶಿಕ್ಷಣಕ್ಕಾಗಿ ವಿವಿಧ ರಾಜ್ಯಗಳಿಂದ ವಿದ್ಯಾರ್ಥಿಗಳನ್ನು ಆಕರ್ಷಿಸುವ ಪ್ರಮುಖ ವಿದ್ಯಾ ಕೇಂದ್ರವಾಗಿದೆ. ಹೈಟೆಕ್ ವಾತಾವರಣದ ಪರಿಣಾಮವಾಗಿ ಕೆಲ ಯುವಕರು ವಿದೇಶದಂತೆಯೇ ಸ್ವತಂತ್ರವಾಗಿ ವರ್ತಿಸುತ್ತಿದ್ದಾರೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ವಿಶೇಷವಾಗಿ ಹೊಸ ವರ್ಷ ಹಾಗೂ ವ್ಯಾಲೆಂಟೈನ್ ಡೇ ಸಂದರ್ಭಗಳಲ್ಲಿ ಇಂತಹ ಘಟನೆಗಳು ಹೆಚ್ಚಾಗುತ್ತಿವೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಕಾಪಾಡಬೇಕು, ಈ ರೀತಿಯ ಅಸಭ್ಯ ವರ್ತನೆಗಳನ್ನು ತಕ್ಷಣ ನಿಲ್ಲಿಸಬೇಕು ಎಂದು ಉಡುಪಿಗರು ಆಗ್ರಹಿಸಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ:

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

11 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

11 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

11 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

11 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago