ಮಣಿಪಾಲ: ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ವ್ಯಕ್ತಿಯೊಬ್ಬರನ್ನು ವಂಚಿಸಿದ ಘಟನೆ ನಡೆದಿದೆ. 80 ಬಡಗಬೆಟ್ಟು ನಿವಾಸಿ ರವೀಂದ್ರ ವಂಚನೆಗೆ ಒಳಗಾದವರು. ನ. 6ರಂದು ಮಣಿಪಾಲದಲ್ಲಿರುವಾಗ ಅವರಿಗೆ ಅನಾಮಧೇಯ ವೀಡಿಯೋ ಕರೆ ಬಂದಿತ್ತು.
ನಾವು ಪೊಲೀಸ್ ಅಧಿಕಾರಿಗಳು ಎಂದು ಹೇಳಿದ್ದು, ನಿಮ್ಮ ಆಧಾರ್ ನಂಬರ್ ಅನ್ನು ಡ್ರಗ್ಸ್ ಕೇಸಿನಲ್ಲಿ ಉಪಯೋಗಿಸಲಾಗಿದೆ. ಉತ್ತರ ಪ್ರದೇಶ ರಾಜ್ಯದ ಅಲಂಬಾಗ್ ಪೊಲೀಸ್ ಠಾಣೆಯಲ್ಲಿ ನಿಮ್ಮ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಾಗಿರುತ್ತದೆ ಎಂದು ತಿಳಿಸಿದ್ದರು.
ವೀಡಿಯೋ ಕಾಲ್ನಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳಿದ್ದರು. ಅವರು ಹಿಂದಿ ಭಾಷೆಯಲ್ಲಿ ಮಾತನಾಡುತ್ತಾ, ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯಲ್ಲಿ ಬೇರೆ ಬೇರೆ ಕೇಸುಗಳಿವೆ. ದೇಶದ್ರೋಹ ಕೇಸಿನಲ್ಲಿ ಕೂಡ ನಿಮ್ಮ ಆಧಾರ್ ಸಂಖ್ಯೆ ಇದೆ. ಅದಕ್ಕೆ ನಿಮ್ಮ ಬ್ಯಾಂಕ್ ಖಾತೆಯ ವಿವರ, ಅಕೌಂಟ್ ಪರಿಶೀಲನೆ ನಡೆಯಬೇಕು ಎಂದು ಹೇಳಿ ಬೇರೆ ಅಕೌಂಟ್ ಸಂಖ್ಯೆ ಕಳುಹಿಸಿ ಆ ಖಾತೆಗೆ 2.19 ಲಕ್ಷ ರೂ. ವರ್ಗಾಯಿಸಬೇಕು.
ಶುಲ್ಕ ವಸೂಲು ಮಾಡಿ ಉಳಿದ ಹಣ ವಾಪಸು ನೀಡಲಾಗುವುದು ಎಂದು ತಿಳಿಸಿದ್ದರು. ಅದರಂತೆ ರವೀಂದ್ರ ಅವರು 2.19 ಲಕ್ಷ ರೂ. ವರ್ಗಾಯಿಸಿದ್ದರು. ಆದರೆ ಆರೋಪಿಗಳು ಅದನ್ನು ಹಿಂದಿರುಗಿಸದೆ ವಂಚನೆ ಎಸಗಿದ್ದಾರೆ ಎಂದವರು ಮಣಿಪಾಲ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…