ಮಣಿಪಾಲ: ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ವ್ಯಕ್ತಿಯೊಬ್ಬರನ್ನು ವಂಚಿಸಿದ ಘಟನೆ ನಡೆದಿದೆ. 80 ಬಡಗಬೆಟ್ಟು ನಿವಾಸಿ ರವೀಂದ್ರ ವಂಚನೆಗೆ ಒಳಗಾದವರು. ನ. 6ರಂದು ಮಣಿಪಾಲದಲ್ಲಿರುವಾಗ ಅವರಿಗೆ ಅನಾಮಧೇಯ ವೀಡಿಯೋ ಕರೆ ಬಂದಿತ್ತು.
ನಾವು ಪೊಲೀಸ್ ಅಧಿಕಾರಿಗಳು ಎಂದು ಹೇಳಿದ್ದು, ನಿಮ್ಮ ಆಧಾರ್ ನಂಬರ್ ಅನ್ನು ಡ್ರಗ್ಸ್ ಕೇಸಿನಲ್ಲಿ ಉಪಯೋಗಿಸಲಾಗಿದೆ. ಉತ್ತರ ಪ್ರದೇಶ ರಾಜ್ಯದ ಅಲಂಬಾಗ್ ಪೊಲೀಸ್ ಠಾಣೆಯಲ್ಲಿ ನಿಮ್ಮ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಾಗಿರುತ್ತದೆ ಎಂದು ತಿಳಿಸಿದ್ದರು.
ವೀಡಿಯೋ ಕಾಲ್ನಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳಿದ್ದರು. ಅವರು ಹಿಂದಿ ಭಾಷೆಯಲ್ಲಿ ಮಾತನಾಡುತ್ತಾ, ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯಲ್ಲಿ ಬೇರೆ ಬೇರೆ ಕೇಸುಗಳಿವೆ. ದೇಶದ್ರೋಹ ಕೇಸಿನಲ್ಲಿ ಕೂಡ ನಿಮ್ಮ ಆಧಾರ್ ಸಂಖ್ಯೆ ಇದೆ. ಅದಕ್ಕೆ ನಿಮ್ಮ ಬ್ಯಾಂಕ್ ಖಾತೆಯ ವಿವರ, ಅಕೌಂಟ್ ಪರಿಶೀಲನೆ ನಡೆಯಬೇಕು ಎಂದು ಹೇಳಿ ಬೇರೆ ಅಕೌಂಟ್ ಸಂಖ್ಯೆ ಕಳುಹಿಸಿ ಆ ಖಾತೆಗೆ 2.19 ಲಕ್ಷ ರೂ. ವರ್ಗಾಯಿಸಬೇಕು.
ಶುಲ್ಕ ವಸೂಲು ಮಾಡಿ ಉಳಿದ ಹಣ ವಾಪಸು ನೀಡಲಾಗುವುದು ಎಂದು ತಿಳಿಸಿದ್ದರು. ಅದರಂತೆ ರವೀಂದ್ರ ಅವರು 2.19 ಲಕ್ಷ ರೂ. ವರ್ಗಾಯಿಸಿದ್ದರು. ಆದರೆ ಆರೋಪಿಗಳು ಅದನ್ನು ಹಿಂದಿರುಗಿಸದೆ ವಂಚನೆ ಎಸಗಿದ್ದಾರೆ ಎಂದವರು ಮಣಿಪಾಲ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…