ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (GCPAS) ನ ಹಿಂದಿನ ವಿದ್ಯಾರ್ಥಿನಿ ಲಾವಣ್ಯ ಏನ್ ಕೆ ಅಮೆರಿಕೆಯ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಬ್ಯೂರೋ ಕೊಡಮಾಡುವ ಪ್ರತಿಷ್ಠಿತ ಗಾಂಧಿ-ಕಿಂಗ್ ಫೆಲೋಶಿಪ್ಗೆ ಆಯ್ಕೆಯಾಗಿದ್ದಾರೆ.
ಶೀಘ್ರದಲ್ಲೇ ಅಮೆರಿಕೆಯ ಅಲಬಾಮಾ ವಿಶ್ವವಿದ್ಯಾಲಯಕ್ಕೆ ಪ್ರಯಾಣಿಸಲಿರುವ ಇವರು ಫೆಲೋಶಿಪ್ಗೆ ಆಯ್ಕೆಯಾದ ಹತ್ತು ಭಾರತೀಯರಲ್ಲಿ ಒಬ್ಬರು ಮತ್ತು ಕರ್ನಾಟಕದಿಂದ ಆಯ್ಕೆಯಾದ ಏಕ ಮಾತ್ರ ವಿದ್ಯಾರ್ಥಿನಿಯಾಗಿದ್ದರೆ.
ಲಾವಣ್ಯ ಏನ್ ಕೆ ೨೦೧೯- ೨೦೨೧ ಸಾಲಿನ 'ಇಕೋಸಾಫಿಕಲ್ ಎಸ್ಥೆಟಿಕ್ಸ್' ಸ್ನಾತಕ್ಕೋತ್ತರ ಪದವಿಯ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಚೆನ್ನೈನ ನಲಂದಾವೇ ಫೌಂಡೇಶನ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಜಿಸಿಪಿಎಎಸ್, ಸಮಕಾಲೀನ ಸಮಸ್ಯೆಗಳಿಗೆ ಸ್ಪಂದಿಸಲು ವಿಶೇಶವಾಗಿ ರೂಪಿಸಲಾದ ಅಪರೂಪದ ಮೂರು ಪದವಿ ಮತ್ತು ಸ್ನಾತಕೋತ್ತರ ಕಾರ್ಯಕ್ರಮಗಳಾದ – ಎಂಎ(ಇಕೋಸಾಫಿಕಲ್ ಎಸ್ಥೆಟಿಕ್ಸ್), ಎಂಎ(ಆರ್ಟ್ ಅಂಡ್ ಪೀಸ್ ಸ್ಟಡೀಸ್ , ಮತ್ತು ಬಿಎ (ಎಸ್ಥೆಟಿಕ್ಸ್ ಅಂಡ್ ಪೀಸ್ ಸ್ಟಡೀಸ್) ನಡೆಸುತ್ತಿದೆ.
ಗಾಂಧಿ-ಕಿಂಗ್ ಫೆಲೋಶಿಪ್ನ ಗುರಿಯು ಮಹಾತ್ಮಾ ಗಾಂಧಿ ಮತ್ತು ಡಾ. ಮಾರ್ಟಿನ್ ಲೂಥರ್ ಕಿಂಗ್, ಜೂನಿಯರ್ ಅವರ ಉದ್ದೇಶದಂತೆ
ಸ್ಥಳೀಯ, ರಾಷ್ಟೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಾಗರಿಕ ಹಕ್ಕುಗಳು, ಸಾಮಾಜಿಕ ನ್ಯಾಯ, ಸಾಮಾಜಿಕ ಒಳಗೊಳ್ಳುವಿಕೆಯ ಕುರಿತು
ಒಟ್ಟಾಗಿ ಕೆಲಸ ಮಾಡಲು ಭಾರತ ಮತ್ತು ಅಮೆರಿಕೆಯ ಯುವನಾಯಕರನ್ನು ಪ್ರೇರೇಪಿಸುವುದಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…