Featured

ಮಣಿಪಾಲ: ಫೈವ್ ಸ್ಟಾರ್ ಹೊಟೇಲ್‌ಗಳಲ್ಲಿ ರೂಮ್ ಪಡೆದು ವಂಚನೆ ; ಆರೋಪಿಯ ಬಂಧನ – vishwanews24

ಮಣಿಪಾಲ: ಫೈವ್ ಸ್ಟಾರ್ ಹೊಟೇಲ್‌ಗಳಲ್ಲಿ ರೂಮ್ ಪಡೆದು ವಂಚನೆ ; ಆರೋಪಿಯ ಬಂಧನ

ಆರೋಪಿಗೆ 14ದಿನಗಳ ಕಾಲ ನ್ಯಾಯಾಂಗ ಬಂಧನ..

ಮಣಿಪಾಲ: ದೇಶದ ವಿವಿಧ ರಾಜ್ಯಗಳಲ್ಲಿನ ಪ್ರತಿಷ್ಠಿತ ಫೈವ್ ಸ್ಟಾರ್ ಹೊಟೇಲ್‌ಗಳನ್ನು ಗುರಿಯಾಗಿಸಿಕೊಂಡು ವಂಚಿಸುತ್ತಿದ್ದ ತಮಿಳುನಾಡು ಮೂಲಕ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಮಿಳುನಾಡು ರಾಜ್ಯದ ತೂತುಕುಡಿಯ ಬಿಮ್ಸೆಂಟ್ ಜಾನ್(67) ಬಂಧಿತ ಆರೋಪಿ. ಈತ ಡಿ.7ರಂದು ಮಣಿಪಾಲ ಕಂಟ್ರಿ ಇನ್ ಹೊಟೇಲ್‌ನಲ್ಲಿ ತನಗೆ ಕಾನ್ಫರೆನ್ಸ್ ಮೀಟಿಂಗ್ ಇದೆ ಎಂಬುದಾಗಿ ಹೇಳಿ ರೂಮ್ ಪಡೆದುಕೊಂಡಿದ್ದನು.

ಮುಂಗಡ ಹಣವನ್ನು ಡಿ.9ರಂದು ಕೊಡುವುದಾಗಿ ಹೇಳಿ ಡಿ.12ರಂದು ರೂಮ್ ಚೆಕ್‌ಔಟ್ ಮಾಡುತ್ತೇನೆ ಎಂದು ಹೊಟೇಲ್ ಮ್ಯಾನೇಜರ್‌ನ್ನು ನಂಬಿಸಿ ರೂಮ್‌ನಲ್ಲಿ ಉಳಿದುಕೊಂಡಿದ್ದನು. ಬಳಿಕ ಹೊಟೆಲ್‌ನಲ್ಲಿಯೇ ಊಟ ತಿಂಡಿ ಮಾಡಿ ಒಟ್ಟು 39,298ರೂ. ಬಿಲ್ ಮಾಡಿ ಹಣ ಕೊಡದೇ ಪರಾರಿಯಾಗಿ ನಂಬಿಸಿ ಮೋಸ ಮಾಡಿರುವುದಾಗಿ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ನೇತೃತ್ವದ ತಂಡ ಆರೋಪಿ ಜೋನ್‌ ನನ್ನು ಮಣಿಪಾಲದಲ್ಲಿ ಡಿ.9ರಂದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತ ಇದೇ ರೀತಿ ದೇಶದ ದೆಹಲಿ, ಮಹಾರಾಷ್ಟ್ರ ಥಾಣೆ, ಕೇರಳದ ಕೊಲ್ಲಂ ಸೇರಿದಂತೆ ಹಲವು ರಾಜ್ಯಗಳಲ್ಲಿನ ಪ್ರತಿಷ್ಠಿತ ಫೈವ್ ಸ್ಟಾರ್ ಹೊಟೇಲ್‌ಗಳಲ್ಲಿ ರೂಮ್ ಪಡೆದು ಕೊಂಡು ಸಾವಿರಾರು ರೂ. ಬಿಲ್ ಮಾಡಿ, ಬಳಿಕ ಹಣ ಪಾವತಿಸದೆ ಪರಾರಿಯಾಗಿ ವಂಚಿಸುತ್ತಿದ್ದನು ಎಂದು ತಿಳಿದುಬಂದಿದೆ.

ಪದವೀಧರನಾಗಿರುವ ಈತನ ವಿರುದ್ಧ ದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 49 ಪ್ರಕರಣಗಳು ದಾಖಲಾಗಿವೆ. ಈತ ಅವಿವಾಹಿತನಾಗಿದ್ದು ಈತ ಈ ರೀತಿಯ ವಂಚನೆ ಪ್ರಕರಣದಲ್ಲಿ ಮೊದಲ ಬಾರಿಗೆ ದೆಹಲಿಯಲ್ಲಿ ಬಂಧಿತನಾಗಿದ್ದನು. ಈ ಪ್ರಕರಣದಲ್ಲಿ ಈತ 1996ರಲ್ಲಿ ಐದು ವರ್ಷ ಜೈಲುಶಿಕ್ಷೆಯನ್ನು ಅನುಭವಿಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಮಣಿಪಾಲ ಪೊಲೀಸರು ಆರೋಪಿಯನ್ನು ಇಂದು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಆರೋಪಿಗೆ 14ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

7 minutes ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

53 minutes ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 hour ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

2 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

3 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

3 hours ago