ಮಣಿಪಾಲ : ಉಡುಪಿ ತಾಲೂಕಿನ ಮಣಿಪಾಲದಲ್ಲಿ ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಪಡೆದಿದ್ದಾರೆ.
ಬಂಧಿತ ಆರೋಪಿಗಳನ್ನು ಇಮ್ರಾನ್ ಹಾಗೂ ಜೈಬಾಯ್ ಎಂದು ಗುರುತಿಸಲಾಗಿದೆ.
ಮಣಿಪಾಲದಲ್ಲಿ ಕೆಲವು ಮಸಾಜ್ ಪಾರ್ಲರ್ ಗಳಿದ್ದು ಅಲ್ಲಿ ಕೆಲವು ಮಸಾಜ್ ಪಾರ್ಲರ್ ಹೆಸರಿನಲ್ಲಿ ಹುಡುಗಿಯರನ್ನು ಇಟ್ಟುಕೊಂಡು ಅನೈತಿಕ ದಂಧೆ ನಡೆಸುತ್ತಾರೆ ಎಂದು ಆರೋಪ ಕೇಳಿಬರುತ್ತಿದೆ.
ಅ. 21 ರಂದು ಮಣಿಪಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್ , ಪೊಲೀಸ್ ನಿರೀಕ್ಷಕರು, ಮಣಿಪಾಲ ಪೊಲೀಸ್ ಠಾಣೆ ಇವರಿಗೆ ಮಣಿಪಾಲದಲ್ಲಿ ಬಾಡಿ ಮಸಾಜ್ ಹೆಸರಿನಲ್ಲಿ ಅಕ್ರಮ ಲಾಭಕ್ಕಾಗಿ ಮಹಿಳೆಯರನ್ನು ಇರಿಸಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಬಂದ ಮಾಹಿತಿ ಮೇರೆಗೆ ದಾಳಿ ಮಾಡಿ ನೊಂದ ಮಹಿಳೆಯರನ್ನು ರಕ್ಷಿಸಿ, ಆರೋಪಿತರುಗಳಾದ ಇಮ್ರಾನ್ ಹಾಗೂ ಜೈಬಾಯ್ ಅಲಿಯಾಸ್ ಎಲಿಸಾ ಎಂಬುವವರನ್ನು ವಶಕ್ಕೆ ಪಡೆದುಕೊಂಡು ಸ್ವತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದು, ಆರೋಪಿತರುಗಳಾದ ಮಹೇಶ್ ಹಾಗೂ ಅಶೋಕ್ ತಮ್ಮ ಸ್ವಂತ ಲಾಭಕ್ಕಾಗಿ ಅಕ್ರಮವಾಗಿ ಹಣಗಳಿಸುವ ಉದ್ದೇಶದಿಂದ ಸೆಲೂನ್ & ಸ್ಪಾ ಬಾಡಿ ಮಸಾಜ್ ಸೆಂಟರ್ ಇಟ್ಟುಕೊಂಡಿರುವುದು ಕಂಡು ಬಂದಿದ್ದು ಆರೋಪಿತರುಗಳಾದ ಇಮ್ರಾನ್ ಹಾಗೂ ಜೈಬಾಯ್ ಅಲಿಯಾಸ್ ಎಲಿಸಾ ಅವರೊಂದಿಗೆ ಸೇರಿಕೊಂಡು ಅವರ ವ್ಯವಹಾರಕ್ಕೆ ಸಹಕರಿಸುತ್ತಿರುವುದು ತಿಳಿದು ಬಂದಿರುವುದಾಗಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…
ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್ಸೈಟ್ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…
ಉಡುಪಿ: ಡಿವೈಡರ್ ಮೇಲೇರಿದ ಸ್ಕೂಲ್ ಬಸ್ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್ಗೆ ಸೇರಿದ ಬಸ್ವೊಂದು ಗುರುವಾರ…
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…