ಮಣಿಪಾಲ : ಉಡುಪಿ ತಾಲೂಕಿನ ಮಣಿಪಾಲದಲ್ಲಿ ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಪಡೆದಿದ್ದಾರೆ.
ಬಂಧಿತ ಆರೋಪಿಗಳನ್ನು ಇಮ್ರಾನ್ ಹಾಗೂ ಜೈಬಾಯ್ ಎಂದು ಗುರುತಿಸಲಾಗಿದೆ.
ಮಣಿಪಾಲದಲ್ಲಿ ಕೆಲವು ಮಸಾಜ್ ಪಾರ್ಲರ್ ಗಳಿದ್ದು ಅಲ್ಲಿ ಕೆಲವು ಮಸಾಜ್ ಪಾರ್ಲರ್ ಹೆಸರಿನಲ್ಲಿ ಹುಡುಗಿಯರನ್ನು ಇಟ್ಟುಕೊಂಡು ಅನೈತಿಕ ದಂಧೆ ನಡೆಸುತ್ತಾರೆ ಎಂದು ಆರೋಪ ಕೇಳಿಬರುತ್ತಿದೆ.
ಅ. 21 ರಂದು ಮಣಿಪಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್ , ಪೊಲೀಸ್ ನಿರೀಕ್ಷಕರು, ಮಣಿಪಾಲ ಪೊಲೀಸ್ ಠಾಣೆ ಇವರಿಗೆ ಮಣಿಪಾಲದಲ್ಲಿ ಬಾಡಿ ಮಸಾಜ್ ಹೆಸರಿನಲ್ಲಿ ಅಕ್ರಮ ಲಾಭಕ್ಕಾಗಿ ಮಹಿಳೆಯರನ್ನು ಇರಿಸಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಬಂದ ಮಾಹಿತಿ ಮೇರೆಗೆ ದಾಳಿ ಮಾಡಿ ನೊಂದ ಮಹಿಳೆಯರನ್ನು ರಕ್ಷಿಸಿ, ಆರೋಪಿತರುಗಳಾದ ಇಮ್ರಾನ್ ಹಾಗೂ ಜೈಬಾಯ್ ಅಲಿಯಾಸ್ ಎಲಿಸಾ ಎಂಬುವವರನ್ನು ವಶಕ್ಕೆ ಪಡೆದುಕೊಂಡು ಸ್ವತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದು, ಆರೋಪಿತರುಗಳಾದ ಮಹೇಶ್ ಹಾಗೂ ಅಶೋಕ್ ತಮ್ಮ ಸ್ವಂತ ಲಾಭಕ್ಕಾಗಿ ಅಕ್ರಮವಾಗಿ ಹಣಗಳಿಸುವ ಉದ್ದೇಶದಿಂದ ಸೆಲೂನ್ & ಸ್ಪಾ ಬಾಡಿ ಮಸಾಜ್ ಸೆಂಟರ್ ಇಟ್ಟುಕೊಂಡಿರುವುದು ಕಂಡು ಬಂದಿದ್ದು ಆರೋಪಿತರುಗಳಾದ ಇಮ್ರಾನ್ ಹಾಗೂ ಜೈಬಾಯ್ ಅಲಿಯಾಸ್ ಎಲಿಸಾ ಅವರೊಂದಿಗೆ ಸೇರಿಕೊಂಡು ಅವರ ವ್ಯವಹಾರಕ್ಕೆ ಸಹಕರಿಸುತ್ತಿರುವುದು ತಿಳಿದು ಬಂದಿರುವುದಾಗಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…