Featured

ಮಣಿಪಾಲ: ಮೆದುಳು ಜ್ವರ ವೈರಸ್‌ನಿಂದ ಹರಡುವ ಕಾಯಿಲೆ , ಲಸಿಕೆ ಪಡೆಯಲು ಭಯಬೇಡ – Vishwanews24

1ರಿಂದ 15 ವರ್ಷದೊಳಗಿನ ಎಲ್ಲ ಮಕ್ಕಳೂ ಕಡ್ಡಾಯವಾಗಿ ಲಸಿಕೆ ಪಡೆಯಬೇಕು..

ಮಣಿಪಾಲ: ಮೆದುಳು ಜ್ವರ ವೈರಸ್‌ನಿಂದ ಹರಡುವ ಕಾಯಿಲೆ. ಬ್ಯಾಕ್ಟೀರಿಯಾದಿಂದ ಹಬ್ಬಿದರೆ ಇದಕ್ಕೆ ಆಯಂಟಿಬಯೋಟಿಕ್‌ ಲಭ್ಯವಿದೆ. ಆದರೆ ವೈರಸ್‌ ರೋಗಕ್ಕೆ ಆಯಂಟಿಬಯೋಟಿಕ್‌ ಇಲ್ಲ. ಈ ನಿಟ್ಟಿನಲ್ಲಿ 1ರಿಂದ 15 ವರ್ಷದೊಳಗಿನ ಎಲ್ಲ ಮಕ್ಕಳೂ ಕಡ್ಡಾಯವಾಗಿ ಲಸಿಕೆ ಪಡೆಯಬೇಕು, ಭಯ ಬೇಡ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗಭೂಷಣ ಉಡುಪ ಮತ್ತು ಮಣಿಪಾಲ ಕೆಎಂಸಿ ಮಕ್ಕಳ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ| ಲೆಸ್ಲಿ ಲೂವಿಸ್‌ ಹೇಳಿದರು.

ಜೆಇ ಲಸಿಕೆ ಪಡೆಯದೆ ಮೆದುಳು ಜ್ವರ ಬಾಧಿಸಿದವರಿಗೆ ಜ್ವರ, ಮೈಕೈ ನೋವು, ವಾಂತಿ, ಫಿಟ್ಸ್‌, ಮಾತನಾಡಲಾಗದ ಸ್ಥಿತಿಯೂ ಎದುರಾಗಬಹುದು. ಪೂರ್ಣ ಗುಣಮುಖರಾಗುವುದು ಕಷ್ಟ. ಸಾವು ಬಂದರೂ ಅಚ್ಚರಿಯಲ್ಲ. ಒಂದು ಬಾರಿ ಮೆದುಳು ನಿಷ್ಕ್ರಿಯಗೊಂಡರೆ ಸರಿಪಡಿಸುವುದು ಕಷ್ಟ ಎಂದರು.

ಹರಡುವ ಬಗೆ ಹೇಗೆ?:

ಹಂದಿಗಳಿಂದ ಪಕ್ಷಿ, ಪಕ್ಷಿಗಳಿಂದ ಸೊಳ್ಳೆ, ಸೊಳ್ಳೆಯಿಂದ ಮನುಷ್ಯರಿಗೆ, ಕೊಕ್ಕರೆಯಂತಹ ಪಕ್ಷಿಗಳಿಂದ ಇದು ಹೆಚ್ಚಾಗಿ ಹರಡುತ್ತದೆ. ಜೂನ್‌ನಿಂದ ಜನವರಿ ವರೆಗೆ ಇದು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತದೆ ಎಂದರು.

ಲಕ್ಷಣಗಳೇನು?:

3ರಿಂದ 5 ದಿನ ಜ್ವರವಿರುತ್ತದೆ. ಈ ಸಂದರ್ಭದಲ್ಲಿ ಮಕ್ಕಳು ಹೆಚ್ಚು ಮಲಗುತ್ತಾರೆ. ನಡೆದಾಡಲು, ಮಾತನಾಡಲು, ನುಂಗಲು ಕಷ್ಟವಾಗುವುದು ಮೆದುಳು ಜ್ವರದ ಲಕ್ಷಣಗಳಾಗಿವೆ. ಶಾಲೆಗೆ ಹೋಗುವ ಮಕ್ಕಳು ಉತ್ಸಾಹದಿಂದ ಇರದಿರುವುದೂ ಕೂಡ ಇದರ ಮುನ್ಸೂಚನೆಯಾಗಿದೆ.

ಡಿ. 25ರ ವರೆಗೆ ಉಚಿತ ಲಸಿಕೆ: ಜೆಇ ಲಸಿಕೆ ತೆಗೆದುಕೊಂಡರೆ ಅಡ್ಡಪರಿಣಾಮವಿಲ್ಲ. ಜ್ವರ, ಸಾಮಾನ್ಯ ಜ್ವರ, ಇಂಜೆಕ್ಷನ್‌ ನೀಡಿದ ಜಾಗದಲ್ಲಿ ನೋವು, ಸುಸ್ತು ಉಂಟಾಗಬಹುದು. 2-3 ದಿನದಲ್ಲಿ ಗುಣಮುಖವಾಗುತ್ತದೆ. ಗುಣಮುಖರಾಗದಿದ್ದಲ್ಲಿ 9449843213 ಸಂಖ್ಯೆಗೆ ಕರೆ ಮಾಡಿ ತಿಳಿಸಿದರೆ ವೈದ್ಯರ ತಂಡ ಬಂದು ತಪಾಸಣೆ ನಡೆಸಲಿದೆ. ಜ್ವರವಿದ್ದು, ಔಷಧ ತೆಗೆದುಕೊಳ್ಳುತ್ತಿರುವವರು ಗುಣ ಮುಖರಾದ ಬಳಿಕ ಲಸಿಕೆ ತೆಗೆದುಕೊಂಡರೆ ಉತ್ತಮ. ಡಿ. 25ರ ವರೆಗೆ ಈ ಲಸಿಕೆಯನ್ನು ನೀಡಲಾಗುತ್ತದೆ. ಬಳಿಕ ಬಂದವರು ಶುಲ್ಕ ಪಾವತಿಸಿ ಪಡೆಯಬಹುದು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago