ಮಣಿಪಾಲ: ಮೆದುಳು ಜ್ವರ ವೈರಸ್ನಿಂದ ಹರಡುವ ಕಾಯಿಲೆ. ಬ್ಯಾಕ್ಟೀರಿಯಾದಿಂದ ಹಬ್ಬಿದರೆ ಇದಕ್ಕೆ ಆಯಂಟಿಬಯೋಟಿಕ್ ಲಭ್ಯವಿದೆ. ಆದರೆ ವೈರಸ್ ರೋಗಕ್ಕೆ ಆಯಂಟಿಬಯೋಟಿಕ್ ಇಲ್ಲ. ಈ ನಿಟ್ಟಿನಲ್ಲಿ 1ರಿಂದ 15 ವರ್ಷದೊಳಗಿನ ಎಲ್ಲ ಮಕ್ಕಳೂ ಕಡ್ಡಾಯವಾಗಿ ಲಸಿಕೆ ಪಡೆಯಬೇಕು, ಭಯ ಬೇಡ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗಭೂಷಣ ಉಡುಪ ಮತ್ತು ಮಣಿಪಾಲ ಕೆಎಂಸಿ ಮಕ್ಕಳ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ| ಲೆಸ್ಲಿ ಲೂವಿಸ್ ಹೇಳಿದರು.
ಜೆಇ ಲಸಿಕೆ ಪಡೆಯದೆ ಮೆದುಳು ಜ್ವರ ಬಾಧಿಸಿದವರಿಗೆ ಜ್ವರ, ಮೈಕೈ ನೋವು, ವಾಂತಿ, ಫಿಟ್ಸ್, ಮಾತನಾಡಲಾಗದ ಸ್ಥಿತಿಯೂ ಎದುರಾಗಬಹುದು. ಪೂರ್ಣ ಗುಣಮುಖರಾಗುವುದು ಕಷ್ಟ. ಸಾವು ಬಂದರೂ ಅಚ್ಚರಿಯಲ್ಲ. ಒಂದು ಬಾರಿ ಮೆದುಳು ನಿಷ್ಕ್ರಿಯಗೊಂಡರೆ ಸರಿಪಡಿಸುವುದು ಕಷ್ಟ ಎಂದರು.
ಹರಡುವ ಬಗೆ ಹೇಗೆ?:
ಹಂದಿಗಳಿಂದ ಪಕ್ಷಿ, ಪಕ್ಷಿಗಳಿಂದ ಸೊಳ್ಳೆ, ಸೊಳ್ಳೆಯಿಂದ ಮನುಷ್ಯರಿಗೆ, ಕೊಕ್ಕರೆಯಂತಹ ಪಕ್ಷಿಗಳಿಂದ ಇದು ಹೆಚ್ಚಾಗಿ ಹರಡುತ್ತದೆ. ಜೂನ್ನಿಂದ ಜನವರಿ ವರೆಗೆ ಇದು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತದೆ ಎಂದರು.
ಲಕ್ಷಣಗಳೇನು?:
3ರಿಂದ 5 ದಿನ ಜ್ವರವಿರುತ್ತದೆ. ಈ ಸಂದರ್ಭದಲ್ಲಿ ಮಕ್ಕಳು ಹೆಚ್ಚು ಮಲಗುತ್ತಾರೆ. ನಡೆದಾಡಲು, ಮಾತನಾಡಲು, ನುಂಗಲು ಕಷ್ಟವಾಗುವುದು ಮೆದುಳು ಜ್ವರದ ಲಕ್ಷಣಗಳಾಗಿವೆ. ಶಾಲೆಗೆ ಹೋಗುವ ಮಕ್ಕಳು ಉತ್ಸಾಹದಿಂದ ಇರದಿರುವುದೂ ಕೂಡ ಇದರ ಮುನ್ಸೂಚನೆಯಾಗಿದೆ.
ಡಿ. 25ರ ವರೆಗೆ ಉಚಿತ ಲಸಿಕೆ: ಜೆಇ ಲಸಿಕೆ ತೆಗೆದುಕೊಂಡರೆ ಅಡ್ಡಪರಿಣಾಮವಿಲ್ಲ. ಜ್ವರ, ಸಾಮಾನ್ಯ ಜ್ವರ, ಇಂಜೆಕ್ಷನ್ ನೀಡಿದ ಜಾಗದಲ್ಲಿ ನೋವು, ಸುಸ್ತು ಉಂಟಾಗಬಹುದು. 2-3 ದಿನದಲ್ಲಿ ಗುಣಮುಖವಾಗುತ್ತದೆ. ಗುಣಮುಖರಾಗದಿದ್ದಲ್ಲಿ 9449843213 ಸಂಖ್ಯೆಗೆ ಕರೆ ಮಾಡಿ ತಿಳಿಸಿದರೆ ವೈದ್ಯರ ತಂಡ ಬಂದು ತಪಾಸಣೆ ನಡೆಸಲಿದೆ. ಜ್ವರವಿದ್ದು, ಔಷಧ ತೆಗೆದುಕೊಳ್ಳುತ್ತಿರುವವರು ಗುಣ ಮುಖರಾದ ಬಳಿಕ ಲಸಿಕೆ ತೆಗೆದುಕೊಂಡರೆ ಉತ್ತಮ. ಡಿ. 25ರ ವರೆಗೆ ಈ ಲಸಿಕೆಯನ್ನು ನೀಡಲಾಗುತ್ತದೆ. ಬಳಿಕ ಬಂದವರು ಶುಲ್ಕ ಪಾವತಿಸಿ ಪಡೆಯಬಹುದು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…