Featured

ಮಣಿಪಾಲ: ಮೆದುಳು ಜ್ವರ ವೈರಸ್‌ನಿಂದ ಹರಡುವ ಕಾಯಿಲೆ , ಲಸಿಕೆ ಪಡೆಯಲು ಭಯಬೇಡ – Vishwanews24

1ರಿಂದ 15 ವರ್ಷದೊಳಗಿನ ಎಲ್ಲ ಮಕ್ಕಳೂ ಕಡ್ಡಾಯವಾಗಿ ಲಸಿಕೆ ಪಡೆಯಬೇಕು..

ಮಣಿಪಾಲ: ಮೆದುಳು ಜ್ವರ ವೈರಸ್‌ನಿಂದ ಹರಡುವ ಕಾಯಿಲೆ. ಬ್ಯಾಕ್ಟೀರಿಯಾದಿಂದ ಹಬ್ಬಿದರೆ ಇದಕ್ಕೆ ಆಯಂಟಿಬಯೋಟಿಕ್‌ ಲಭ್ಯವಿದೆ. ಆದರೆ ವೈರಸ್‌ ರೋಗಕ್ಕೆ ಆಯಂಟಿಬಯೋಟಿಕ್‌ ಇಲ್ಲ. ಈ ನಿಟ್ಟಿನಲ್ಲಿ 1ರಿಂದ 15 ವರ್ಷದೊಳಗಿನ ಎಲ್ಲ ಮಕ್ಕಳೂ ಕಡ್ಡಾಯವಾಗಿ ಲಸಿಕೆ ಪಡೆಯಬೇಕು, ಭಯ ಬೇಡ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗಭೂಷಣ ಉಡುಪ ಮತ್ತು ಮಣಿಪಾಲ ಕೆಎಂಸಿ ಮಕ್ಕಳ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ| ಲೆಸ್ಲಿ ಲೂವಿಸ್‌ ಹೇಳಿದರು.

ಜೆಇ ಲಸಿಕೆ ಪಡೆಯದೆ ಮೆದುಳು ಜ್ವರ ಬಾಧಿಸಿದವರಿಗೆ ಜ್ವರ, ಮೈಕೈ ನೋವು, ವಾಂತಿ, ಫಿಟ್ಸ್‌, ಮಾತನಾಡಲಾಗದ ಸ್ಥಿತಿಯೂ ಎದುರಾಗಬಹುದು. ಪೂರ್ಣ ಗುಣಮುಖರಾಗುವುದು ಕಷ್ಟ. ಸಾವು ಬಂದರೂ ಅಚ್ಚರಿಯಲ್ಲ. ಒಂದು ಬಾರಿ ಮೆದುಳು ನಿಷ್ಕ್ರಿಯಗೊಂಡರೆ ಸರಿಪಡಿಸುವುದು ಕಷ್ಟ ಎಂದರು.

ಹರಡುವ ಬಗೆ ಹೇಗೆ?:

ಹಂದಿಗಳಿಂದ ಪಕ್ಷಿ, ಪಕ್ಷಿಗಳಿಂದ ಸೊಳ್ಳೆ, ಸೊಳ್ಳೆಯಿಂದ ಮನುಷ್ಯರಿಗೆ, ಕೊಕ್ಕರೆಯಂತಹ ಪಕ್ಷಿಗಳಿಂದ ಇದು ಹೆಚ್ಚಾಗಿ ಹರಡುತ್ತದೆ. ಜೂನ್‌ನಿಂದ ಜನವರಿ ವರೆಗೆ ಇದು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತದೆ ಎಂದರು.

ಲಕ್ಷಣಗಳೇನು?:

3ರಿಂದ 5 ದಿನ ಜ್ವರವಿರುತ್ತದೆ. ಈ ಸಂದರ್ಭದಲ್ಲಿ ಮಕ್ಕಳು ಹೆಚ್ಚು ಮಲಗುತ್ತಾರೆ. ನಡೆದಾಡಲು, ಮಾತನಾಡಲು, ನುಂಗಲು ಕಷ್ಟವಾಗುವುದು ಮೆದುಳು ಜ್ವರದ ಲಕ್ಷಣಗಳಾಗಿವೆ. ಶಾಲೆಗೆ ಹೋಗುವ ಮಕ್ಕಳು ಉತ್ಸಾಹದಿಂದ ಇರದಿರುವುದೂ ಕೂಡ ಇದರ ಮುನ್ಸೂಚನೆಯಾಗಿದೆ.

ಡಿ. 25ರ ವರೆಗೆ ಉಚಿತ ಲಸಿಕೆ: ಜೆಇ ಲಸಿಕೆ ತೆಗೆದುಕೊಂಡರೆ ಅಡ್ಡಪರಿಣಾಮವಿಲ್ಲ. ಜ್ವರ, ಸಾಮಾನ್ಯ ಜ್ವರ, ಇಂಜೆಕ್ಷನ್‌ ನೀಡಿದ ಜಾಗದಲ್ಲಿ ನೋವು, ಸುಸ್ತು ಉಂಟಾಗಬಹುದು. 2-3 ದಿನದಲ್ಲಿ ಗುಣಮುಖವಾಗುತ್ತದೆ. ಗುಣಮುಖರಾಗದಿದ್ದಲ್ಲಿ 9449843213 ಸಂಖ್ಯೆಗೆ ಕರೆ ಮಾಡಿ ತಿಳಿಸಿದರೆ ವೈದ್ಯರ ತಂಡ ಬಂದು ತಪಾಸಣೆ ನಡೆಸಲಿದೆ. ಜ್ವರವಿದ್ದು, ಔಷಧ ತೆಗೆದುಕೊಳ್ಳುತ್ತಿರುವವರು ಗುಣ ಮುಖರಾದ ಬಳಿಕ ಲಸಿಕೆ ತೆಗೆದುಕೊಂಡರೆ ಉತ್ತಮ. ಡಿ. 25ರ ವರೆಗೆ ಈ ಲಸಿಕೆಯನ್ನು ನೀಡಲಾಗುತ್ತದೆ. ಬಳಿಕ ಬಂದವರು ಶುಲ್ಕ ಪಾವತಿಸಿ ಪಡೆಯಬಹುದು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

49 minutes ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 hour ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

4 hours ago