Featured

ಮಣಿಪಾಲ: ಯುವಕನಿಗೆ ಚೂರಿ ಇರಿತ ಪ್ರಕರಣ; ನಾಲ್ವರ ಬಂಧನ – Vishwanews24

ಮಣಿಪಾಲ: ಯುವಕನಿಗೆ ಚೂರಿ ಇರಿತ ಪ್ರಕರಣ; ನಾಲ್ವರ ಬಂಧನ

ಮಣಿಪಾಲ: ಮಣಿಪಾಲದಲ್ಲಿ ಅ.1ರಂದು ರಾತ್ರಿ ವೇಳೆ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ನಾಲ್ವರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸೈಫ್ ಕುಕ್ಕಿಕಟ್ಟೆ, ಉದಾಫ್ ಚಿಟ್ಪಾಡಿ, ರಾಹುಲ್ ಶೆಟ್ಟಿ ಕಟಪಾಡಿ ಮತ್ತು ಅಫ್ರಿದಿ ದೊಡ್ಡಣಗುಡ್ಡೆ ಎಂದು ಗುರುತಿಸಲಾಗಿದ್ದು ಚೂರಿ ಇರಿತಕ್ಕೆ ಒಳಗಾದ ಪ್ರತಾಪ್(19) ಎಂಬವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಲೀಸ್ ಪ್ರಕಟಣೆಯ ಪ್ರಕಾರ ಪ್ರತಾಪ್, ತಿಲಕ್ ಮತ್ತು ಹರ್ಷಿತ್ ಎಂಬವರು ಮಣಿಪಾಲ ಬಾಬಾ ಪಾಯಿಂಟ್ ಹೋಟೆಲ್ ಬಳಿ ರಾತ್ರಿ ತಿರುಗಾಡಲು ಹೋಗಿದ್ದು, ಅಲ್ಲಿ ಮೂರು ಜನರು ಇತರರೊಂದಿಗೆ ಸೇರಿ ಗಲಾಟೆ ಮಾಡುತ್ತಿದ್ದರು. ಇದನ್ನು ಪ್ರತಾಪ್ ಪ್ರಶ್ನಿಸಿದ್ದು, ಆಗ ಆರೋಪಿಗಳು ಪ್ರತಾಪ್ಗೆ ಹೊಡೆದು ದೂಡಿದ್ದಾರೆಂದು ದೂರಲಾಗಿದೆ.

ಬಳಿಕ ಪ್ರತಾಪ್, ತಿಲಕ್ ಮತ್ತು ಹರ್ಷಿತ್ನೊಂದಿಗೆ ರಾತ್ರಿ ಮಣಿಪಾಲದ ಎಡ್ಜ್ ಹೊಟೇಲ್ ಬಳಿ ಹೋದಾಗ ಕಾರಿನಲ್ಲಿ ಬಂದ ಇದೇ ಮೂರು ಜನ ಹಾಗೂ ಇತರರು ಪ್ರತಾಪ್ಗೆ ಕೈಯಿಂದ ಹೊಡೆದು ಚೂರಿಯಿಂದ ಕೈಗೆ ಇರಿದು ಗಾಯಗೊಳಿಸಿದ್ದಾರೆ ಎಂದು ದೂರಲಾಗಿದೆ.

ಅದೇ ರೀತಿ ಉದಾಫ್ ಚಿಟ್ಪಾಡಿ ತನ್ನ ಮೇಲೆ ಪ್ರತಾಪ್ ತಂಡ ಕೈ ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿದೆ ಎಂದು ಪ್ರತಿದೂರು ನೀಡಿದ್ದಾರೆ. ಅದರಂತೆ ಈ ಎರಡೂ ಪ್ರಕರಣಗಳು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

29 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

1 hour ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

23 hours ago