Featured

ಮಣಿಪಾಲ : ಯುವಕನ ಅಪಹರಿಸಿ ಹಲ್ಲೆ, ಜೀವ ಬೆದರಿಕೆ – vishwanews24

ಮಣಿಪಾಲ : ಗಾಂಜಾ ಮಾರಾಟದ ಬಗ್ಗೆ ಹಫ್ತಾ ನೀಡುವಂತೆ ಒತ್ತಾಯಿಸಿ ಯುವಕನ ಅಪಹರಿಸಿ ಹಲ್ಲೆ, ಜೀವ ಬೆದರಿಕೆ

ಮಣಿಪಾಲ: ಗರುಡ ಗ್ಯಾಂಗ್‌ ನಡೆಸಿದ ಗ್ಯಾಂಗ್‌ವಾರ್‌ ಘಟನೆ ಮಾಸುವ ಮುನ್ನವೇ ಮತ್ತೊಂದು ದಾಂಧಲೆ, ಹಲ್ಲೆ ಪ್ರಕರಣ ಬೆಳಕಿಗೆ ಬಂದಿದ್ದು, ಸ್ಥಳೀಯರನ್ನು ಆತಂಕಗೊಳಿಸಿದೆ.

ಗಾಂಜಾ ಮಾರಾಟದ ಬಗ್ಗೆ ಹಫ್ತಾ ನೀಡುವಂತೆ ಒತ್ತಾಯಿಸಿ ಯುವಕನಿಗೆ ಹಲ್ಲೆ ಮಾಡಿ ಜೀವ ಬೆದರಿಕೆಯೊಡ್ಡಿದ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಉದ್ಯಾವರ ಕಂಪನ್‌ಬೆಟ್ಟು ನಿವಾಸಿ ಮೊಹಮ್ಮದ್‌ ಪರ್ವೇಜ್‌ ಉಮರ್‌ (25)ಗೆ ಪರಿಚಯದ ಪೈಝಲ್‌ ಕರೆ ಮಾಡಿ ನಿನ್ನ ಬಳಿ ಮಾತನಾಡಲು ಇದೆ ಎಂದು ಮಣಿಪಾಲಕ್ಕೆ ಕರೆಸಿಕೊಂಡಿದ್ದಾನೆ. ಪೈಝಲ್‌ ಜತೆಗೆ ದಾವುದ್‌ ಇಬ್ರಾಹಿಂ, ಇಸಾಕ್‌ ಮೂವರು ಜತೆಗೆ ಸೇರಿ ಪರ್ವೇಜ್‌ ಉಮರ್‌ನನ್ನು ಬಲತ್ಕಾರದಿಂದ ಕಾರಿನಲ್ಲಿ ಎಳೆದು ಹಾಕಿಕೊಂಡು ಅಪರಿಚಿತ ಜಾಗಕ್ಕೆ ಕೊಂಡೊಯ್ದಿದ್ದಾರೆ. ಅನಂತರ ಪರ್ವೇಜ್‌ ಉಮರ್‌ಗೆ ನೀನು ಗಾಂಜಾ ಮಾರಾಟ ಮಾಡುತ್ತಿದ್ದೀಯ ಎಂದು ನಮಗೆ ಮಾಹಿತಿ ಬಂದಿದ್ದು, ಮಣಿಪಾಲದಲ್ಲಿ ನೀನು ಗಾಂಜಾ ಮಾರಾಟ ಮಾಡಿದರೆ ನಮಗೆ ತಿಂಗಳ ಮಾಮೂಲಿ ಹಣ ಕೊಡಬೇಕು. ಇದಕ್ಕೆ ಒಪ್ಪದದ್ದಿರೆ ನಿನ್ನನ್ನು ಜೀವಂತವಾಗಿ ಬಿಡುವುದಿಲ್ಲ ಎಂದು ಬೆದರಿಸಿದ್ದಾರೆ.

ಜತೆಗೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ. ಅನಂತರ ನೀವು ಹೇಳಿದ ಹಾಗೇ ಕೇಳುತ್ತೇನೆ ನನ್ನನ್ನು ಬಿಟ್ಟುಬಿಡಿ ಎಂದಿದ್ದಕ್ಕೆ ಬೆಳಗಿನ ಜಾವ ಅವರ ಮನೆ ಬಳಿ ಬಿಟ್ಟು ಹೋಗಿದ್ದಾರೆ. ಪೊಲೀಸರಿಗೆ ದೂರು ನೀಡಿದರೇ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆಯನ್ನು ಹಾಕಿದ್ದಾರೆ ಎಂದು ಪರ್ವೇಜ್‌ ದೂರು ನೀಡಿದ್ದಾರೆ.

ಯುವಕ ಆಸ್ಪತ್ರೆಗೆ ದಾಖಲು
ತಂಡದಲ್ಲಿದ್ದ ದಾವೂದ್‌ ಇಬ್ರಾಹಿಂ ಎಂಬವನು ಪರ್ವೇಜ್‌ಗೆ ದೊಣ್ಣೆಯಿಂದ ಕಾಲಿಗೆ, ಕೈಗೆ, ಬೆನ್ನಿಗೆ ಹೊಡೆದಿದ್ದು, ಅದೇ ಕೋಲಿನಿಂದ ಇಸಾಕ್‌ ಬೆನ್ನಿಗೆ ಮತ್ತು ಕಾಲಿಗೆ ಹೊಡೆದಿದ್ದಾನೆ. ಫೈಝಲ್‌ ಕೈಯಿಂದ ಕೆನ್ನೆಗೆ, ಬೆನ್ನಿಗೆ ಹೊಡೆದು ಕಾಲಿನಿಂದ ತುಳಿದು ಹಲ್ಲೆ ಮಾಡಿದ್ದಾರೆ ಎಂದು ದೂರಲಾಗಿದೆ.

ಗಾಯಗೊಂಡ ಪರ್ವೇಜ್‌ ಉಮರ್‌ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.

Vishwa News 24

Recent Posts

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

28 minutes ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

32 minutes ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

1 hour ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

1 hour ago

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

2 hours ago

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

2 hours ago