ಮಣಿಪಾಲ: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡ ಅನಂತರ ಅಂಗದಾನದ ಮೂಲಕ ಇತರರಿಗೆ ಜೀವ ನೀಡಿ ಸಾರ್ಥಕತೆ ಮೆರೆದ ಘಟನೆ ನಡೆದಿದೆ.
ಕುಂದಾಪುರದ ನಿವಾಸಿ ರಾಘವೇಂದ್ರ(35) ಅವರಿಗೆ ಫೆ.17ರಂದು ಮಧ್ಯರಾತ್ರಿ 12.20 ವೇಳೆಗೆ ರಸ್ತೆ ಅಪಘಾತ ನಡೆಯಿತು. ತೀವ್ರ ಗಾಯಗಳ ಅನಂತರ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಯಿತು.
ಸಂಪೂರ್ಣ ವೈದ್ಯಕೀಯ ಚಿಕಿತ್ಸೆಯ ಹೊರತಾಗಿಯೂ ರಾಘವೇಂದ್ರ ಅವರು ಚೇತರಿಸಿಕೊಳ್ಳುವ ಯಾವುದೇ ಲಕ್ಷಣ ಕಂಡುಬರಲಿಲ್ಲ. ಮಾನವ ಅಂಗಾಂಗ ಕಸಿ ಕಾಯಿದೆ 1994 ರ ಪ್ರಕಾರ ಪರಿಣಿತ ವೈದ್ಯರ ಸಮಿತಿಯು ಎರಡು ಬಾರಿ ಅಧಿಕೃತವಾಗಿ ಬ್ರೈನ್ ಡೆಡ್ ಎಂದು ಘೋಷಿಸಿತು.
ಅವರ ಕುಟುಂಬವು ಅವರ ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡುವ ನಿರ್ಧಾರವನ್ನು ತೆಗೆದುಕೊಂಡರು. ಆ ಮೂಲಕ ಅಗತ್ಯವಿರುವ ಇತರರಿಗೆ ಅಂಗ ದಾನ ಮಾಡಲು ನಿರ್ಧರಿಸಲಾಯಿತು.
ಅದರಂತೆ ರಾಘವೇಂದ್ರ ಅವರ ಒಂದು ಕಿಡ್ನಿ ಮತ್ತು ಯಕೃತ್ತನ್ನು ಮಂಗಳೂರಿನ ಎಜೆ ಆಸ್ಪತ್ರೆ, ಶ್ವಾಸಕೋಶವನ್ನು ಸಿಕಂದರಾಬಾದ್ನ ಕಿಮ್ಸ್ ಆಸ್ಪತ್ರೆಗೆ ಹಾಗೂ ಒಂದು ಕಿಡ್ನಿ ಎರಡು ಕಾರ್ನಿಯಾ ಮತ್ತು ಚರ್ಮವನ್ನು ಮಣಿಪಾಲದಲ್ಲಿನ ನೋಂದಾಯಿತ ರೋಗಿಗಳಿಗೆ ಬಳಸಲು ಉಳಿಸಿಕೊಳ್ಳಲಾಯಿತು .
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…