Featured

ಮಣಿಪಾಲ: ರೈಲು ಹತ್ತುವ ವೇಳೆ ಚಿನ್ನಾಭರಣ ಕಳವು : ಪೋಲಿಸರ ಕ್ಷಿಪ್ರ ಕಾರ್ಯಾಚರಣೆ – ಇಬ್ಬರು ಕಳ್ಳಿಯರ ಬಂಧನ – VIshwanews24

ಮಣಿಪಾಲ: ರೈಲು ಹತ್ತುವ ವೇಳೆ ಚಿನ್ನಾಭರಣ ಕಳವು : ಪೋಲಿಸರ ಕ್ಷಿಪ್ರ ಕಾರ್ಯಾಚರಣೆ – ಇಬ್ಬರು ಕಳ್ಳಿಯರ ಬಂಧನ

ಮಣಿಪಾಲ : ರೈಲು ಹತ್ತುವ ಸಂಧರ್ಭದಲ್ಲಿ ವ್ಯಾನಿಟಿ ಬ್ಯಾಗ್ ನಿಂದ ಸುಮಾರು 4 ಲಕ್ಷ ರುಪಾಯಿ ಮೌಲ್ಯದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೋಲಿಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಚಿನ್ನಾಭರಣ ಕಳವುಗೈದ ಇಬ್ಬರು ಮಹಿಳೆಯರನ್ನು ಮಣಿಪಾಲ ಪೋಲಿಸರು ಬಂದಿಸಿದ್ದಾರೆ.

ಮಾರ್ಚ್ 14 ರಂದು ಪುನೀತ್ ವಸಂತ್ ಹೆಗ್ಡೆ ಎಂಬವರು ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ತಮ್ಮ ಕುಟುಂಬದವರೊಂದಿಗೆ ಮಂಗಳೂರು – ಮುಂಬಯಿ ನಡುವೆ ಸಂಚರಿಸುವ ರೈಲು ಹತ್ತುವ ವೇಳೆ ಬಂಗಾರದ ಒಡವೆಗಳನ್ನು ವ್ಯಾನಿಟಿ ಬ್ಯಾಗ್ ನಲ್ಲಿ ಇಟ್ಟಿದ್ದರು. ಇಂದ್ರಾಳಿ ರೈಲು ನಿಲ್ದಾಣದಿಂದ ರೈಲು ಹೊರಟಾಗ ವ್ಯಾನಿಟಿ ಬ್ಯಾಗ್ ನ ಜಿಪ್ ತೆರೆದಿರುವುದು ಪುನೀತ್ ಅವರ ಗಮನಕ್ಕ ಬಂದಿದ್ದು, ಬ್ಯಾಗ್ ನ ಒಳಗಿದ್ದ ಚಿನ್ನಾಭರಣಗಳ ಕವರ್ ಕೂಡಾ ಕಾಣೆಯಾಗಿತ್ತು, ಕಾಣೆಯಾದ ಚಿನ್ನಾಭರಣಗಳ ಮೌಲ್ಯ ಸುಮಾರು 4 ಲಕ್ಷದಾಗಿದ್ದು ಮಣಿಪಾಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣ ದಾಖಲಾದ ತಕ್ಷಣ  ಆರೋಪಿಯ ಪತ್ತೆ ಬಗ್ಗೆ, ಮಣಿಪಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ, ಪಿಎಸ್ಐ ನವೀನ್ ನಾಯ್ಕ, ಎ.ಎಸ್.ಐ ಶೈಲೇಶ್, ಹೆಚ್ ಸಿ, ಇಮ್ರಾನ್, ಶುಭ, ಅರಣ ಚಾಳೇಕರ್ ತಂಡ ರೈಲೆ ನಿಲ್ದಾಣಕ್ಕೆ ಭೇಟಿ ನೀಡಿ ರೈಲ್ವೆ ಪೊಲೀಸರ ಸಹಕಾರದೊಂದಿಗೆ ಸಿಸಿಟಿವಿ ದ್ರಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಮಾಹಿತಿ ಪಡೆದು ಅದರ ಆಧಾರದ ಮೇಲೆ ತಕ್ಷಣ ಕಾರ್ಯಾಚರಣೆ ನಡೆಸಿ ಘಟನೆ ನಡೆದ 8 ಗಂಟೆಗಳ ಒಳಗೆ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.

ಬಂಧಿತರನ್ನು ಶಿವಮೊಗ್ಗ ಜಿಲ್ಲೆಯ ಲಲಿತಾ ಬೋವಿ (41) ಮತ್ತು ಭದ್ರಾವತಿಯ ಸುಶೀಲಮ್ಮ (64) ಎಂದು ಗುರುತಿಸಲಾಗಿದೆ. ಇವರು ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುವುದು, ಪಿಕ್ ಪಾಕೆಟ್ ಹಾಗೂ ಜನಸಂದಣಿಯಲ್ಲಿ ಹಿರಿಯ ನಾಗರಿಕರನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುವ ಚಾಳಿ ಉಳ್ಳವರಾಗಿರುವುದು ತನಿಖೆಯಿಂದ ಕಂಡು ಬಂದಿರುತ್ತದೆ. ಇವರ ವಿರುದ್ಧ ಈ ಹಿಂದೆ ದಾವಣಗೆರೆ ಜಿಲ್ಲೆಯಲ್ಲಿ ಹೊನ್ನಾಳಿ ಪೊಲೀಸ್ ಠಾಣಿ ಸೇರಿದಂತೆ ರಾಜ್ಯಾದ ಇತರೆ ಕಡೆಗಳಲಿ ಪ್ರಕರಣ ದಾಖಲಾಗಿರುವುದು ಕಂಡು ಬಂದಿರುತ್ತದೆ, ಆರೋಪಿತರನ್ನು, ದಸ್ತಗಿರಿ ಮಾಡಿ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

2 hours ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

2 hours ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

2 hours ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

3 hours ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

4 hours ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

2 days ago