Featured

ಮಣಿಪಾಲ: ರೈಲು ಹತ್ತುವ ವೇಳೆ ಚಿನ್ನಾಭರಣ ಕಳವು : ಪೋಲಿಸರ ಕ್ಷಿಪ್ರ ಕಾರ್ಯಾಚರಣೆ – ಇಬ್ಬರು ಕಳ್ಳಿಯರ ಬಂಧನ – VIshwanews24

ಮಣಿಪಾಲ: ರೈಲು ಹತ್ತುವ ವೇಳೆ ಚಿನ್ನಾಭರಣ ಕಳವು : ಪೋಲಿಸರ ಕ್ಷಿಪ್ರ ಕಾರ್ಯಾಚರಣೆ – ಇಬ್ಬರು ಕಳ್ಳಿಯರ ಬಂಧನ

ಮಣಿಪಾಲ : ರೈಲು ಹತ್ತುವ ಸಂಧರ್ಭದಲ್ಲಿ ವ್ಯಾನಿಟಿ ಬ್ಯಾಗ್ ನಿಂದ ಸುಮಾರು 4 ಲಕ್ಷ ರುಪಾಯಿ ಮೌಲ್ಯದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೋಲಿಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಚಿನ್ನಾಭರಣ ಕಳವುಗೈದ ಇಬ್ಬರು ಮಹಿಳೆಯರನ್ನು ಮಣಿಪಾಲ ಪೋಲಿಸರು ಬಂದಿಸಿದ್ದಾರೆ.

ಮಾರ್ಚ್ 14 ರಂದು ಪುನೀತ್ ವಸಂತ್ ಹೆಗ್ಡೆ ಎಂಬವರು ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ತಮ್ಮ ಕುಟುಂಬದವರೊಂದಿಗೆ ಮಂಗಳೂರು – ಮುಂಬಯಿ ನಡುವೆ ಸಂಚರಿಸುವ ರೈಲು ಹತ್ತುವ ವೇಳೆ ಬಂಗಾರದ ಒಡವೆಗಳನ್ನು ವ್ಯಾನಿಟಿ ಬ್ಯಾಗ್ ನಲ್ಲಿ ಇಟ್ಟಿದ್ದರು. ಇಂದ್ರಾಳಿ ರೈಲು ನಿಲ್ದಾಣದಿಂದ ರೈಲು ಹೊರಟಾಗ ವ್ಯಾನಿಟಿ ಬ್ಯಾಗ್ ನ ಜಿಪ್ ತೆರೆದಿರುವುದು ಪುನೀತ್ ಅವರ ಗಮನಕ್ಕ ಬಂದಿದ್ದು, ಬ್ಯಾಗ್ ನ ಒಳಗಿದ್ದ ಚಿನ್ನಾಭರಣಗಳ ಕವರ್ ಕೂಡಾ ಕಾಣೆಯಾಗಿತ್ತು, ಕಾಣೆಯಾದ ಚಿನ್ನಾಭರಣಗಳ ಮೌಲ್ಯ ಸುಮಾರು 4 ಲಕ್ಷದಾಗಿದ್ದು ಮಣಿಪಾಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣ ದಾಖಲಾದ ತಕ್ಷಣ  ಆರೋಪಿಯ ಪತ್ತೆ ಬಗ್ಗೆ, ಮಣಿಪಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ, ಪಿಎಸ್ಐ ನವೀನ್ ನಾಯ್ಕ, ಎ.ಎಸ್.ಐ ಶೈಲೇಶ್, ಹೆಚ್ ಸಿ, ಇಮ್ರಾನ್, ಶುಭ, ಅರಣ ಚಾಳೇಕರ್ ತಂಡ ರೈಲೆ ನಿಲ್ದಾಣಕ್ಕೆ ಭೇಟಿ ನೀಡಿ ರೈಲ್ವೆ ಪೊಲೀಸರ ಸಹಕಾರದೊಂದಿಗೆ ಸಿಸಿಟಿವಿ ದ್ರಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಮಾಹಿತಿ ಪಡೆದು ಅದರ ಆಧಾರದ ಮೇಲೆ ತಕ್ಷಣ ಕಾರ್ಯಾಚರಣೆ ನಡೆಸಿ ಘಟನೆ ನಡೆದ 8 ಗಂಟೆಗಳ ಒಳಗೆ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.

ಬಂಧಿತರನ್ನು ಶಿವಮೊಗ್ಗ ಜಿಲ್ಲೆಯ ಲಲಿತಾ ಬೋವಿ (41) ಮತ್ತು ಭದ್ರಾವತಿಯ ಸುಶೀಲಮ್ಮ (64) ಎಂದು ಗುರುತಿಸಲಾಗಿದೆ. ಇವರು ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುವುದು, ಪಿಕ್ ಪಾಕೆಟ್ ಹಾಗೂ ಜನಸಂದಣಿಯಲ್ಲಿ ಹಿರಿಯ ನಾಗರಿಕರನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುವ ಚಾಳಿ ಉಳ್ಳವರಾಗಿರುವುದು ತನಿಖೆಯಿಂದ ಕಂಡು ಬಂದಿರುತ್ತದೆ. ಇವರ ವಿರುದ್ಧ ಈ ಹಿಂದೆ ದಾವಣಗೆರೆ ಜಿಲ್ಲೆಯಲ್ಲಿ ಹೊನ್ನಾಳಿ ಪೊಲೀಸ್ ಠಾಣಿ ಸೇರಿದಂತೆ ರಾಜ್ಯಾದ ಇತರೆ ಕಡೆಗಳಲಿ ಪ್ರಕರಣ ದಾಖಲಾಗಿರುವುದು ಕಂಡು ಬಂದಿರುತ್ತದೆ, ಆರೋಪಿತರನ್ನು, ದಸ್ತಗಿರಿ ಮಾಡಿ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

11 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago