Featured

ಮಣಿಪಾಲ: ರೈಲು ಹತ್ತುವ ಸಮಯದಲ್ಲಿ ಬ್ಯಾಗ್ ನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನ ಕಳವು – Vishwanews24

ಮಣಿಪಾಲ: ರೈಲು ಹತ್ತುವ ಸಮಯದಲ್ಲಿ ಬ್ಯಾಗ್ ನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನ ಕಳವು

ಮಣಿಪಾಲ: ರೈಲು ನಿಲ್ದಾಣದಲ್ಲಿ ರೈಲು ಹತ್ತುವ ಸಮಯದಲ್ಲಿ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಬಂಗಾರದ ಒಡವೆಗಳನ್ನು ಎಗರಿಸಿದ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆ ದೂರು ದಾಖಲಾಗಿದೆ.

ಪುನೀತ ವಸಂತ್ ಹೆಗ್ಡೆ ತಮ್ಮ ಕುಟುಂಬದೊಂದಿಗೆ ಮುಂಬಿಯಿಗೆ ಹೋಗಲು ಮಾ.14 ರಂದು ಮಂಗಳೂರು – ಮುಂಬಯಿ ಎಕ್ಸ್ ಪ್ರೆಸ್ ರೈಲು ನಂಬ್ರ 12134 ರಲ್ಲಿ ಏರಿದ್ದರು. ಇದಕ್ಕೂ ಮುನ್ನ ತಮ್ಮ ವ್ಯಾನಿಟಿ ಬ್ಯಾಗ್ ನಲ್ಲಿ ಬಂಗಾರದ ಒಡವೆಗಳನ್ನು ಒಂದು ಕವರ್ ನಲ್ಲಿ ಹಾಕಿ ಬಟ್ಟೆಗಳ ಮಧ್ಯೆ ಇಟ್ಟಿದ್ದು ಬ್ಯಾಗನ್ನು ಹೆಗಲಿನಲ್ಲಿ ಹಾಕಿಕೊಂಡಿದ್ದರು. ಇಂದ್ರಾಳಿ ರೈಲು ನಿಲ್ದಾಣದಿಂದ ರೈಲು ಹೊರಟಿದ್ದು ಸೀಟ್ ನಲ್ಲಿ ಕುಳಿತಾಗ ಪುನೀತ ಅವರ ವ್ಯಾನಿಟಿ ಬ್ಯಾಗ್ ಝಿಫ್ ತೆರೆದಿರುವುದು ಕಂಡು ಬಂದಿದ್ದು, ಬ್ಯಾಗ್ ಪರಿಶೀಲಿಸಿದಾಗ ಬ್ಯಾಗ್ ನ ಓಳಗೆ ಇಟ್ಟಿದ್ದ ಬಂಗಾರದ ಒಡೆವೆಗಳ ಕವರ್ ಕಾಣೆಯಾಗಿತ್ತು.

ಮಧ್ಯಾಹ್ನ 03:35 ಗಂಟೆಗೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ರೈಲು ಹತ್ತುವ ಸಮಯ ಯಾರೋ ಕಳ್ಳರು ವ್ಯಾನಿಟಿ ಬ್ಯಾಗ್ ಝಿಫ್ ನ್ನು ತೆರೆದು ಬ್ಯಾಗ್ ನಲ್ಲಿದ್ದ ಬಂಗಾರದ ಒಡವೆಗಳನ್ನು ಹಾಗೂ ವ್ಯಾಚ್ ನ್ನು ಕಳವು ಮಾಡಿದ್ದಾರೆ. ಕಳುವಾದ ಚಿನ್ನಾಭರಣಗಳ ಅಂದಾಜು ತೂಕ 100 ಗ್ರಾಂ ಆಗಿದ್ದು, ಅಂದಾಜು ಮೌಲ್ಯ 4,00,000 ಆಗಿರುತ್ತದೆ, ಹಾಗೂ ಕಳುವಾದ ವ್ಯಾಚ್ ನ ಅಂದಾಜು ಬೆಲೆ 3000 ಆಗಿರುತ್ತದೆ, ಕಳುವಾದ ಸ್ವತ್ತುಗಳ ಒಟ್ಟು ಮೌಲ್ಯ 4,03,000 ರೂಪಾಯಿ ಆಗಿರುತ್ತದೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 52/2023 ಕಲಂ: 379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

4 hours ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

4 hours ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

4 hours ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

4 hours ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

6 hours ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

2 days ago