Featured

ಮಣಿಪಾಲ: ರೈಲು ಹತ್ತುವ ಸಮಯದಲ್ಲಿ ಬ್ಯಾಗ್ ನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನ ಕಳವು – Vishwanews24

ಮಣಿಪಾಲ: ರೈಲು ಹತ್ತುವ ಸಮಯದಲ್ಲಿ ಬ್ಯಾಗ್ ನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನ ಕಳವು

ಮಣಿಪಾಲ: ರೈಲು ನಿಲ್ದಾಣದಲ್ಲಿ ರೈಲು ಹತ್ತುವ ಸಮಯದಲ್ಲಿ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಬಂಗಾರದ ಒಡವೆಗಳನ್ನು ಎಗರಿಸಿದ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆ ದೂರು ದಾಖಲಾಗಿದೆ.

ಪುನೀತ ವಸಂತ್ ಹೆಗ್ಡೆ ತಮ್ಮ ಕುಟುಂಬದೊಂದಿಗೆ ಮುಂಬಿಯಿಗೆ ಹೋಗಲು ಮಾ.14 ರಂದು ಮಂಗಳೂರು – ಮುಂಬಯಿ ಎಕ್ಸ್ ಪ್ರೆಸ್ ರೈಲು ನಂಬ್ರ 12134 ರಲ್ಲಿ ಏರಿದ್ದರು. ಇದಕ್ಕೂ ಮುನ್ನ ತಮ್ಮ ವ್ಯಾನಿಟಿ ಬ್ಯಾಗ್ ನಲ್ಲಿ ಬಂಗಾರದ ಒಡವೆಗಳನ್ನು ಒಂದು ಕವರ್ ನಲ್ಲಿ ಹಾಕಿ ಬಟ್ಟೆಗಳ ಮಧ್ಯೆ ಇಟ್ಟಿದ್ದು ಬ್ಯಾಗನ್ನು ಹೆಗಲಿನಲ್ಲಿ ಹಾಕಿಕೊಂಡಿದ್ದರು. ಇಂದ್ರಾಳಿ ರೈಲು ನಿಲ್ದಾಣದಿಂದ ರೈಲು ಹೊರಟಿದ್ದು ಸೀಟ್ ನಲ್ಲಿ ಕುಳಿತಾಗ ಪುನೀತ ಅವರ ವ್ಯಾನಿಟಿ ಬ್ಯಾಗ್ ಝಿಫ್ ತೆರೆದಿರುವುದು ಕಂಡು ಬಂದಿದ್ದು, ಬ್ಯಾಗ್ ಪರಿಶೀಲಿಸಿದಾಗ ಬ್ಯಾಗ್ ನ ಓಳಗೆ ಇಟ್ಟಿದ್ದ ಬಂಗಾರದ ಒಡೆವೆಗಳ ಕವರ್ ಕಾಣೆಯಾಗಿತ್ತು.

ಮಧ್ಯಾಹ್ನ 03:35 ಗಂಟೆಗೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ರೈಲು ಹತ್ತುವ ಸಮಯ ಯಾರೋ ಕಳ್ಳರು ವ್ಯಾನಿಟಿ ಬ್ಯಾಗ್ ಝಿಫ್ ನ್ನು ತೆರೆದು ಬ್ಯಾಗ್ ನಲ್ಲಿದ್ದ ಬಂಗಾರದ ಒಡವೆಗಳನ್ನು ಹಾಗೂ ವ್ಯಾಚ್ ನ್ನು ಕಳವು ಮಾಡಿದ್ದಾರೆ. ಕಳುವಾದ ಚಿನ್ನಾಭರಣಗಳ ಅಂದಾಜು ತೂಕ 100 ಗ್ರಾಂ ಆಗಿದ್ದು, ಅಂದಾಜು ಮೌಲ್ಯ 4,00,000 ಆಗಿರುತ್ತದೆ, ಹಾಗೂ ಕಳುವಾದ ವ್ಯಾಚ್ ನ ಅಂದಾಜು ಬೆಲೆ 3000 ಆಗಿರುತ್ತದೆ, ಕಳುವಾದ ಸ್ವತ್ತುಗಳ ಒಟ್ಟು ಮೌಲ್ಯ 4,03,000 ರೂಪಾಯಿ ಆಗಿರುತ್ತದೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 52/2023 ಕಲಂ: 379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

14 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

15 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

15 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

15 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

16 hours ago