ಮಣಿಪಾಲ : ಶಾರ್ಟ್ ಸರ್ಕ್ಯೂಟ್ : ನಡುರಸ್ತೆಯಲ್ಲೇ ಹೊತ್ತಿ ಉರಿದ ಬೆಂಗಳೂರಿನಿಂದ ಮಣಿಪಾಲಕ್ಕೆ ಬರುತ್ತಿದ್ದ ಖಾಸಗಿ ಬಸ್ ; ಪ್ರಯಾಣಿಕರು ಅಪಾಯದಿಂದ ಪಾರು – Vishwanews24
ಮಣಿಪಾಲ : ಶಾರ್ಟ್ ಸರ್ಕ್ಯೂಟ್ : ನಡುರಸ್ತೆಯಲ್ಲೇ ಹೊತ್ತಿ ಉರಿದ ಬೆಂಗಳೂರಿನಿಂದ ಮಣಿಪಾಲಕ್ಕೆ ಬರುತ್ತಿದ್ದ ಖಾಸಗಿ ಬಸ್ ; ಪ್ರಯಾಣಿಕರು ಅಪಾಯದಿಂದ ಪಾರು – Vishwanews24
ಉಡುಪಿ: ಇಂದು ನಸುಕಿನ ಜಾವ 4.30ರ ಸುಮಾರಿಗೆ ಬೆಂಗಳೂರಿನಿಂದ ಮಣಿಪಾಲಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಘಟನೆ ಮಣಿಪಾಲದಲ್ಲಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಅವಘಡವಾಗಿರಬೇಕೆಂದು ಶಂಕಿಸಲಾಗಿದೆ.
ಬೆಂಕಿ ದುರಂತದಿಂದ ಬಸ್ಸು ಸಂಪೂರ್ಣ ಸುಟ್ಟು ಕರಕಲಾಗಿದೆ. ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಚಾಲಕ, ನಿರ್ವಾಹಕರೂ ಕೂಡ ಅಪಾಯದಿಂದ ಪಾರಾಗಿದ್ದಾರೆ.
ಉಳ್ಳಾಲ ಉರೂಸ್: ತುಂಡಾಗಿ ಬಿದ್ದ ಜಾಯಿಂಟ್ ವೀಲ್ : ಹಲವರಿಗೆ ಗಾಯ – Vishwanews24
