ಮಣಿಪಾಲ: ಸಾಂವಿಧಾನಿಕವಾಗಿ ತೆಗೆದುಕೊಂಡಿರುವ ಪ್ರಮಾಣವಚನದ ವಿರುದ್ಧ ಸಿಎಂ ನೀಡಿರುವ ಹೇಳಿಕೆಯನ್ನು ಹಿಂಪಡೆದು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಉಡುಪಿಯ ಮಣಿಪಾಲದಲ್ಲಿಂದು ಪ್ರತಿಭಟನೆ ನಡೆಯಿತು.ಮಣಿಪಾಲದ ರಜತಾದ್ರಿ ಎದುರು ಪ್ರಗತಿಪರ ಸಂಘಟನೆಗಳು ಈ ಪ್ರತಿಭಟನೆ ಆಯೋಜಿಸಿದ್ದವು.
ಮಂಗಳೂರಿನಲ್ಲಿ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಸಿಎಂ ಮಾತನಾಡುತ್ತಾ “ಕಾನೂನು ಪಾಲನೆ ಜೊತೆಗೆ ಸಾಮಾಜಿಕ ಸಾಮರಸ್ಯ ಕಾಪಾಡೋದು ಸರ್ಕಾರದ ಕರ್ತವ್ಯ. ಯುವಕರು ಕೂಡ ಸಾಮಾಜಿಕವಾಗಿ ಧಕ್ಕೆ ಆಗದಂತೆ ನೋಡಿಕೊಳ್ಳಬೇಕು. ಮೊರಾಲಿಟಿ ಅನ್ನೋದು ಸಮಾಜದಲ್ಲಿ ಬೇಕಲ್ವಾ, ನೈತಿಕತೆ ಇಲ್ಲದೆ ಸಮಾಜದಲ್ಲಿ ಬದುಕೋಕೆ ಆಗುತ್ತಾ? ಇವತ್ತು ನಾವು ನೈತಿಕತೆ ಇಲ್ಲದೆ ಬದುಕೋಕೆ ಆಗಲ್ಲ. ನಮ್ಮೆಲ್ಲರ ಸಂಬಂಧಗಳು ಮತ್ತು ಶಾಂತಿ ಸುವ್ಯವಸ್ಥೆ ನಿಂತಿರೋದು ನಮ್ಮ ನೈತಿಕತೆ ಮೇಲೆ. ಇದು ಇಲ್ಲದಾಗ ಆಕ್ಷನ್- ರಿಯಾಕ್ಷನ್ ಆಗುತ್ತದೆ. ಇದು ಸಹಜ ಎಂದು ಹೇಳಿದ್ದೀರಿ.ಈ ನಿಮ್ಮ ಹೇಳಿಕೆ ಒಬ್ಬ ಮುಖ್ಯಮಂತ್ರಿಗಳಿಗೆ ಶೋಭೆ ತರುವುದಿಲ್ಲ.ಅನೈತಿಕ ಪೊಲೀಸ್ ಗಿರಿ ಮತ್ತು ಮತೀಯ ಗೂಂಡಾಗಿರಿ ಯನ್ನು ಈ ನಿಮ್ಮ ಹೇಳಿಕೆ ಸಮರ್ಥಿಸುತ್ತದೆ.ನೀವು ತಕ್ಷಣ ಈ ಹೇಳಿಕೆ ಹಿಂಪಡೆದು ,ರಾಜ್ಯದಲ್ಲಿ ನಡೆಯುತ್ತಿರುವ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಹಾಕಬೇಕು ಎಂದು ಮುಖಂಡರು ಆಗ್ರಹಿಸಿದರು.ಬಳಿಕ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಲಾಯಿತು.
ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್ ಬೆಂಗಳೂರು: ಬ್ರೇಕ್ಫಾಸ್ಟ್ ಮೀಟಿಂಗ್ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್…
ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿದ್ದರಾಮಯ್ಯ ಬೆಂಗಳೂರು: ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ…
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…