ಮಣಿಪಾಲ : ಸ್ಕೂಟಿ ಹಾಗೂ ಬೈಕ್ ನಡುವೆ ಅಪಘಾತ ನಡೆದ ಪರಿಣಾಮ ಬೈಕ್ನ ಸಹಸವಾರೆಯಾಗಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಹಿರಿಯಡಕದ ಸುಶ್ಮಿತಾ (19) ಎಂದು ಗುರುತಿಸಲಾಗಿದೆ.
ಕಾಯಿನ್ ಸರ್ಕಲ್ನಿಂದ ಸಿಂಡಿಕೇಟ್ ಸರ್ಕಲ್ಗೆ ಸ್ಕೂಟಿ ಮತ್ತು ಬೈಕ್ ಗಳೆರಡೂ ತೆರಳುತ್ತಿತ್ತು. ಈ ವೇಳೆ ಸ್ಕೂಟಿ ಸವಾರ ಸಿಗ್ನಲ್ ನೀಡದೆ ಒಮ್ಮೆಲೇ ಬಲಕ್ಕೆ ತಿರುಗಿದ್ದಾನೆ. ಪರಿಣಾಮ ಬೈಕ್ ಸವಾರ ಸ್ಕೂಟಿಗೆ ಢಿಕ್ಕಿ ಹೊಡೆದಿದ್ದಾನೆ.
ಢಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಸುಶ್ಮಿತಾ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನು ಸುಶ್ಮಿತಾ ನಗರದ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …