ಮಣಿಪಾಲ: ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ಅವರು ಶುಕ್ರವಾರ ಹೃದಯಘಾತದಿಂದ ನಿಧನ ಹೊಂದಿದರು.
ಇರಾ (ಕುಂಡಾವು), ಕೂಡ್ಲು, ಮೂಲ್ಕಿ, ಕರ್ನಾಟಕ ಮೇಳ ಮತ್ತು ಧರ್ಮಸ್ಥಳ ಮೇಳದಲ್ಲಿ ಯಕ್ಷ ವ್ಯವಸಾಯ ಮಾಡಿದವರು ಕುಂಬಳೆ ಶ್ರೀಧರ್ ರಾವ್ ಅವರು. ತೆ೦ಕುತಿಟ್ಟಿನ ಅಪ್ರತಿಮ ಸ್ತ್ರೀವೇಷಧಾರಿಯಾಗಿ ಕಲಾಸೇವೆ ಮಾಡಿರುವ ಅವರು ದಮಯಂತಿ, ದಾಕ್ಷಾಯಿಣಿ, ಅಮ್ಮು ಬಲ್ಲಾಳ್ತಿ, ಲಕ್ಷ್ಮಿ, ಸುಭದ್ರೆ, ಸತ್ಯಭಾಮೆ ಅಲ್ಲದೆ ಪ್ರಮೀಳೆ, ಶಶಿಪ್ರಭೆ ಮುಂತಾದ ಪಾತ್ರಗಳಿಂದ ದೊಡ್ಡ ಹೆಸರು ಮಾಡಿದವರು.
ಮಾಲಿಂಗ ಮುಕಾರಿ ಮತ್ತು ಕಾವೇರಿ ದಂಪತಿಗಳಿಗೆ ಪುತ್ರನಾಗಿ ಶ್ರೀಧರ ರಾಯರು 1948ರ ಜುಲೈ 23ರಂದು ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ನಾಯ್ಕಾಪುವಿನಲ್ಲಿ ಜನಿಸಿದರು. 1962ರಲ್ಲಿ ಕಲ್ಲಾಡಿ ಕೊರಗ ಶೆಟ್ಟರ ಯಜಮಾನಿಕೆಯ ಕುಂಡಾವು ಮೇಳಕ್ಕೆ ಶ್ರೀಧರ ರಾಯರು ಬಾಲಕಲಾವಿದನಾಗಿ ಸೇರ್ಪಡೆಗೊಂಡರು.
ಬಳಿಕ ಕೂಡ್ಲು, ಮೂಲ್ಕಿ, ಕರ್ನಾಟಕ ಮೇಳ ಮತ್ತು ಧರ್ಮಸ್ಥಳ ಮೇಳಗಳಲ್ಲಿ ಕುಂಬಳೆ ಶ್ರೀಧರ ರಾಯರು ಕಲಾಸೇವೆ ಮಾಡಿದವರು. ಧರ್ಮಸ್ಥಳ ಮೇಳದಲ್ಲಿ ಸುಮಾರು ನಾಲ್ಕು ದಶಕಗಳ ಕಾಲ ತಿರುಗಾಟ ಮಾಡಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…