Featured

ಮಣಿಪಾಲ: ಹೊಸವರ್ಷದ ಸಂಭ್ರಮಾಚರಣೆ ನೆಪದಲ್ಲಿ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ತೊಂದರೆ; 14 ಜನ ವಶಕ್ಕೆ – vishwanews24

ಮಣಿಪಾಲ: ಹೊಸವರ್ಷದ ಸಂಭ್ರಮಾಚರಣೆ ನೆಪದಲ್ಲಿ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ತೊಂದರೆ; 14 ಜನ ವಶಕ್ಕೆ

ಮಣಿಪಾಲ : ಹೊಸವರ್ಷದ ಸಂಭ್ರಮಾಚರಣೆ ನೆಪದಲ್ಲಿ ಸುಗಮ ಸಂಚಾರಕ್ಕೆ ಹಾಗೂ ಸಾರ್ವಜನಿಕರ ನೆಮ್ಮದಿಗೆ ಅಡ್ಡಿ ಉಂಟು ಮಾಡಿದ ಹಿನ್ನಲೆಯಲ್ಲಿ ಮಣಿಪಾಲ ಪೊಲೀಸರು ಒಂದು ಕಾರು, ಎಂಟು ದ್ವಿಚಕ್ರ ವಾಹನ ಹಾಗೂ 14 ಜನ ಆರೋಪಿತರನ್ನು ವಶಕ್ಕೆ ಪಡೆದಿದ್ದಾರೆ.

ಮಣಿಪಾಲ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ರಾಘವೇಂದ್ರ ಸಿ ಹಾಗೂ ಸಿಬ್ಬಂದಿಗಳು ಹೊಸವರ್ಷದ ಮದ್ಯರಾತ್ರಿ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ರೌಂಡ್ಸ್ ಕರ್ತವ್ಯದಲ್ಲಿರುವಾಗ ಮಣಿಪಾಲದ ರಸ್ತೆಯಲ್ಲಿ ಸುಮಾರು 7 ರಿಂದ 10 ಜನರು ಕಾರು ಹಾಗೂ ದ್ವಿ ಚಕ್ರ ವಾಹನಗಳಲ್ಲಿ ಸವಾರಿ ಮಾಡಿಕೊಂಡು ಬಂದು ಅಕ್ರಮ ಕೂಟ ಸೇರಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದರು.

ಬೈಕ್ ನ ಸೈಲೆನ್ಸರ್‌ ನಲ್ಲಿ ಬೆಂಕಿಯ ಕಿಡಿ ಬರುವ ರೀತಿಯಲ್ಲಿ ಅಪಾಯಕಾರಿಯಾಗಿ ದುಡುಕುತನ ಹಾಗೂ ನಿರ್ಲಕ್ಷ್ಯತೆಯಿಂದ ಚಾಲನೆ ರಸ್ತೆಯ ಮದ್ಯದಲ್ಲಿ ವಾಹನಗಳನ್ನು ನಿಲ್ಲಿಸಿಕೊಂಡು ಸುಗಮ ಸಂಚಾರಕ್ಕೆ ತೊಂದರೆ ಕೊಟ್ಟ ಹಿನ್ನಲೆಯಲ್ಲಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 01/2024 ಕಲಂ: 143, 147, 279, 290 ಜೊತೆಗೆ 149 ಐ ಪಿ ಸಿ ಯಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ತನಿಖೆಕೈಗೊಂಡಿದ್ದಾರೆ

ಈ ಪ್ರಕರಣದಲ್ಲಿ ಆರೋಪಿತರ ಪತ್ತೆ ಬಗ್ಗೆ ಮಣಿಪಾಲ ಠಾಣಾ ಪೊಲೀಸ್ ನಿರೀಕ್ಷಕರಾದ ದೇವರಾಜ ಟಿ ವಿ ರವರ ನೇತೃತ್ವದಲ್ಲಿ ಪೊಲೀಸ್‌ ಉಪನಿರೀಕ್ಷಕರಾದ ರಾಘವೆಂದ್ರ ಸಿ, ಅಕ್ಷಯಾ ಕುಮಾರಿ ಎಸ್ ಎನ್, ಪ್ರೊ ಪಿ ಎಸ್ ಐ ಲೋಹಿತ್, ಎ ಎಸ್‌ ಐ ವಿವೇಕಾನಂದ, ಅಬ್ದುಲ್‌ ರಜಾಕ್, ಪ್ರಸನ್ನ, ಇಮ್ರಾನ್, ಮಂಜುನಾಥ ಎಂ ಆರ್, ಚನ್ನೇಶ್ ಕೆ ಹೆಚ್, ಬಸವರಾಜ್ ಶೆಟ್ಟಿ, ರವರನ್ನೊಳಗೊಂಡ ತಂಡ ಘಟನೆಗೆ ಸಂಬಂದಿಸಿದ ಸಾಮಾಜಿಕ ಜಾಲತಾಣದ ವಿಡಿಯೋ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿ ಪ್ರಕರಣಕ್ಕೆ ಸಂಬಂದಪಟ್ಟ ವಾಹನಗಳನ್ನು ಪತ್ತೆ ಮಾಡಿದ್ದು ವಾಹನಗಳನ್ನು ಜಪ್ತಿ ಮಾಡಿ, 14 ಜನ ಆರೋಪಿತರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ ತನಿಖೆ ಕೈಗೊಂಡಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago