Featured

ಮಣಿಪಾಲ: ಹೊಸವರ್ಷದ ಸಂಭ್ರಮಾಚರಣೆ ನೆಪದಲ್ಲಿ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ತೊಂದರೆ; 14 ಜನ ವಶಕ್ಕೆ – vishwanews24

ಮಣಿಪಾಲ: ಹೊಸವರ್ಷದ ಸಂಭ್ರಮಾಚರಣೆ ನೆಪದಲ್ಲಿ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ತೊಂದರೆ; 14 ಜನ ವಶಕ್ಕೆ

ಮಣಿಪಾಲ : ಹೊಸವರ್ಷದ ಸಂಭ್ರಮಾಚರಣೆ ನೆಪದಲ್ಲಿ ಸುಗಮ ಸಂಚಾರಕ್ಕೆ ಹಾಗೂ ಸಾರ್ವಜನಿಕರ ನೆಮ್ಮದಿಗೆ ಅಡ್ಡಿ ಉಂಟು ಮಾಡಿದ ಹಿನ್ನಲೆಯಲ್ಲಿ ಮಣಿಪಾಲ ಪೊಲೀಸರು ಒಂದು ಕಾರು, ಎಂಟು ದ್ವಿಚಕ್ರ ವಾಹನ ಹಾಗೂ 14 ಜನ ಆರೋಪಿತರನ್ನು ವಶಕ್ಕೆ ಪಡೆದಿದ್ದಾರೆ.

ಮಣಿಪಾಲ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ರಾಘವೇಂದ್ರ ಸಿ ಹಾಗೂ ಸಿಬ್ಬಂದಿಗಳು ಹೊಸವರ್ಷದ ಮದ್ಯರಾತ್ರಿ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ರೌಂಡ್ಸ್ ಕರ್ತವ್ಯದಲ್ಲಿರುವಾಗ ಮಣಿಪಾಲದ ರಸ್ತೆಯಲ್ಲಿ ಸುಮಾರು 7 ರಿಂದ 10 ಜನರು ಕಾರು ಹಾಗೂ ದ್ವಿ ಚಕ್ರ ವಾಹನಗಳಲ್ಲಿ ಸವಾರಿ ಮಾಡಿಕೊಂಡು ಬಂದು ಅಕ್ರಮ ಕೂಟ ಸೇರಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದರು.

ಬೈಕ್ ನ ಸೈಲೆನ್ಸರ್‌ ನಲ್ಲಿ ಬೆಂಕಿಯ ಕಿಡಿ ಬರುವ ರೀತಿಯಲ್ಲಿ ಅಪಾಯಕಾರಿಯಾಗಿ ದುಡುಕುತನ ಹಾಗೂ ನಿರ್ಲಕ್ಷ್ಯತೆಯಿಂದ ಚಾಲನೆ ರಸ್ತೆಯ ಮದ್ಯದಲ್ಲಿ ವಾಹನಗಳನ್ನು ನಿಲ್ಲಿಸಿಕೊಂಡು ಸುಗಮ ಸಂಚಾರಕ್ಕೆ ತೊಂದರೆ ಕೊಟ್ಟ ಹಿನ್ನಲೆಯಲ್ಲಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 01/2024 ಕಲಂ: 143, 147, 279, 290 ಜೊತೆಗೆ 149 ಐ ಪಿ ಸಿ ಯಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ತನಿಖೆಕೈಗೊಂಡಿದ್ದಾರೆ

ಈ ಪ್ರಕರಣದಲ್ಲಿ ಆರೋಪಿತರ ಪತ್ತೆ ಬಗ್ಗೆ ಮಣಿಪಾಲ ಠಾಣಾ ಪೊಲೀಸ್ ನಿರೀಕ್ಷಕರಾದ ದೇವರಾಜ ಟಿ ವಿ ರವರ ನೇತೃತ್ವದಲ್ಲಿ ಪೊಲೀಸ್‌ ಉಪನಿರೀಕ್ಷಕರಾದ ರಾಘವೆಂದ್ರ ಸಿ, ಅಕ್ಷಯಾ ಕುಮಾರಿ ಎಸ್ ಎನ್, ಪ್ರೊ ಪಿ ಎಸ್ ಐ ಲೋಹಿತ್, ಎ ಎಸ್‌ ಐ ವಿವೇಕಾನಂದ, ಅಬ್ದುಲ್‌ ರಜಾಕ್, ಪ್ರಸನ್ನ, ಇಮ್ರಾನ್, ಮಂಜುನಾಥ ಎಂ ಆರ್, ಚನ್ನೇಶ್ ಕೆ ಹೆಚ್, ಬಸವರಾಜ್ ಶೆಟ್ಟಿ, ರವರನ್ನೊಳಗೊಂಡ ತಂಡ ಘಟನೆಗೆ ಸಂಬಂದಿಸಿದ ಸಾಮಾಜಿಕ ಜಾಲತಾಣದ ವಿಡಿಯೋ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿ ಪ್ರಕರಣಕ್ಕೆ ಸಂಬಂದಪಟ್ಟ ವಾಹನಗಳನ್ನು ಪತ್ತೆ ಮಾಡಿದ್ದು ವಾಹನಗಳನ್ನು ಜಪ್ತಿ ಮಾಡಿ, 14 ಜನ ಆರೋಪಿತರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ ತನಿಖೆ ಕೈಗೊಂಡಿದ್ದಾರೆ.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

6 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

6 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

7 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

7 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

7 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

7 days ago