ಒಂದು ವರ್ಷದ ಬಾಲಕನಿಗೆ ಸಿವಿಯರ್ ಕಂಬೈನ್ಡ್ ಇಮ್ಮುನೊ ಡೆಫಿಸೈನ್ಸಿ ಎಂಬ ತೀವ್ರ ತರಹದ ರೋಗ ನಿರೋಧಕ ಶಕ್ತಿಯ ಕೊರತೆ ಇರುವುದು ಪತ್ತೆಯಾಗಿದ್ದು, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಅಸ್ಥಿಮಜ್ಜೆ (ಬೋನ್ ಮಾರೋ ಟ್ರಾನ್ಸ್ ಪ್ಲಾಂಟೇಶನ್) ಕಸಿ ಮಾಡಲು ಕಳುಹಿಸಲಾಗಿತ್ತು. ಅಸ್ಥಿಮಜ್ಜೆ ಕಸಿ ಮಾಡುವುದೊಂದೆ ಆತನ ಕಾಯಿಲೆಯನ್ನು ಗುಣಪಡಿಸಬಲ್ಲ ಏಕೈಕ ಚಿಕಿತ್ಸೆಯಾಗಿತ್ತು.
ಮೂಳೆ ಮಜ್ಜೆಯ ಕಸಿ ಎನ್ನುವುದು ವೈದ್ಯರು ಮತ್ತು ಶುಶ್ರೂಷಾ ಸಿಬಂದಿಗಳ ತಜ್ಞ ತಂಡವು ಮಾಡುವ ಒಂದು ಸಂಕೀರ್ಣ ವೈದ್ಯಕೀಯ ಚಿಕಿತ್ಸೆಯಾಗಿದ್ದು, ಅಸ್ಥಿ ಮಜ್ಜೆಯ ಕಸಿ ಮಾಡುವದರಿಂದ ಇದಕ್ಕು ಮೊದಲು ಗುಣಪಡಿಸಲಾಗದಂತಹ ಕಾಯಿಲೆಗಳಿಗೆ ಚಿಕಿತ್ಸೆ ನೀಡಬಹುದಾಗಿದೆ ಮತ್ತು ಅನೇಕ ರೋಗಿಗಳ ಜೀವನವನ್ನು ಬದಲಾಯಿಸಿದೆ.
ಅಸ್ಥಿ ಮಜ್ಜೆಯ ಕಸಿಯು ಕೆಂಪು ಕೋಶದ ಅಸ್ವಸ್ಥತೆಗಳು (ಥಲಸ್ಸೆಮಿಯಾ), ಮೂಳೆ ಮಜ್ಜೆಯ ವೈಫಲ್ಯ, ಇಮ್ಯುನೊ ಡಿಫಿಷಿಯನ್ಸಿ ಮತ್ತು ಕೆಲವು ಕ್ಯಾನ್ಸರ್ ಗಳಂತಹ ರೋಗಗಳಿಗೆ ಶಾಶ್ವತ ಗುಣಪಡಿಸುವ ಚಿಕಿತ್ಸೆಯಾಗಿದೆ. ಈ ಚಿಕಿತ್ಸೆಯಲ್ಲಿ ರೋಗಗ್ರಸ್ತ ಮೂಳೆ ಮಜ್ಜೆಯನ್ನು ತೆಗೆದು ಹಾಕಿ ಬದಲಿಗೆ, ರೋಗಮುಕ್ತ ಕಾಂಡಕೋಶಗಳನ್ನು ಬಳಸಿಕೊಂಡು ಆರೋಗ್ಯಕರ ರಕ್ತದ ಕಣಗಳನ್ನು ತಯಾರಿಸುವ ಮೂಳೆ ಮಜ್ಜೆಯನ್ನು ಕಸಿ ಮಾಡಲುತ್ತದೆ. ಈ ಕಾಂಡಕೋಶವನ್ನು ದಾನ ಮಾಡಲು ಪೂರ್ಣ ಎಚ್ಎಲ್ಎ-ಹೊಂದಾಣಿಕೆಯ ದಾನಿಗಳು ಇದಕ್ಕೆ ಸೂಕ್ತವಾಗಿರುತ್ತಾರೆ. ಆದರೆ ಪ್ರಸ್ತುತ ಲಭ್ಯವಿರುವ ತಂತ್ರಜ್ಞಾನ ಮತ್ತು ನಾವೀನ್ಯತೆಗಳ ಪ್ರಗತಿಯೊಂದಿಗೆ, ಅರ್ಧ- ಹೊಂದಾಣಿಕಯ ದಾನಿಗಳಿಂದ ಸಹ ಮೂಳೆ ಮಜ್ಜೆಯ ಕಸಿಯನ್ನು ಯಶಸ್ವಿಯಾಗಿ ಮಾಡಬಹುದು. ಆದ್ದರಿಂದ ಪ್ರತಿಯೊಬ್ಬ ರೋಗಿಯು ಪೋಷಕರು ಅಥವಾ ಒಡಹುಟ್ಟಿದವರ ರೂಪದಲ್ಲಿ ದಾನಿಯನ್ನು ಹೊಂದಿರುತ್ತಾರೆ.
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗದ ವೈದ್ಯರ ತಂಡವು ಈ ಮಗುವನ್ನು ಉಳಿಸಲು ವಿಶಿಷ್ಟವಾದ ಅಸ್ಥಿಮಜ್ಜೆಯ ಕಸಿ ಮಾಡಲು ನಿರ್ಧರಿಸಿತು. ರೋಗಿಯ ತಂದೆ ಕೇವಲ ಶೇಕಡಾ 50 ರಷ್ಟು ಎಚ್ಎಲ್ಎ ಹೊಂದಿಕೆಯಾಗಿದ್ದರು ಮತ್ತು ವೈದ್ಯಕೀಯ ಪರೀಕ್ಷೆಗಳ ನಂತರ ದಾನಿಯಾಗಿ ಆಯ್ಕೆಯಾದರು.
ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಅರ್ಚನಾ ಎಂವಿ ಮಾತನಾಡಿ, ‘ರೋಗಿಯು ಮಾರಣಾಂತಿಕ ಕ್ಷಯರೋಗದ ಸೋಂಕಿನಿಂದ ಬಳಲುತ್ತಿದ್ದ ಕಾರಣ ಕೀಮೋಥೆರಪಿ ಮತ್ತು ಇಮ್ಯುನೊಸಪ್ರೆಸಿವ್ ಔಷಧಗಳನ್ನು ಬಳಸಲಾಗಲಿಲ್ಲ. ಅಂತಹ ಔಷಧಿಗಳನ್ನು ತಪ್ಪಿಸಲು, ಟಿ ಸಿ ಆರ್ ಆಲ್ಫಾ ಬೀಟಾ ಡಿಪ್ಲೀಷನ್ ಎಂದು ಕರೆಯಲ್ಪಡುವ ಸ್ಟೆಮ್ ಸೆಲ್ ಗ್ರಾಫ್ಟ್ ಮ್ಯಾನಿಪ್ಯುಲೇಷನ್ ತಂತ್ರಜ್ಞಾನವನ್ನು ಬಳಸಲಾಯಿತು, ಇದು ಕಸಿ ಸಮಯದಲ್ಲಿ ಸಹಜವಾಗಿ ಪ್ರಕ್ರಿಯೆ ನಡೆಯಲು ಸಹಾಯ ಮಾಡುತ್ತದೆ ಮತ್ತು ಅಡ್ಡಪರಿಣಾಮಗಳನ್ನು ಕಡಿಮೆ ಮಾಡುತ್ತದೆ’ ಎಂದು ಹೇಳಿದರು.
ಈ ಮಗುವಿಗೆ ನಮ್ಮ ವಿಶೇಷ ಮೂಳೆ ಮಜ್ಜೆ ಘಟಕದಲ್ಲಿ ಮೂಳೆ ಮಜ್ಜೆಯ ಕಸಿ ಮಾಡಲಾಯಿತು ಮತ್ತು 6 ವಾರಗಳ ನಂತರ ಸ್ಥಿರ ಸ್ಥಿತಿಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಯಶಸ್ವಿ ಅರ್ಧ-ಹೊಂದಾಣಿಕೆಯ ಟಿ ಸೆಲ್ ಡೆಪ್ಲೇಷನ್ ನೊಂದಿಗೆ ಮೂಳೆ ಮಜ್ಜೆ ಕಸಿ ನಡೆಸಿ, ಈಗ ಒಂದು ವರುಷವಾಗಿದ್ದು ಮಗುವು ರೋಗ ಮತ್ತು ಸೋಂಕಿನಿಂದ ಮುಕ್ತವಾಗಿ , ಆರೋಗ್ಯಕರ ಜೀವನ ನಡೆಸುತ್ತಿದೆ.
ಇಮ್ಯುನೊಹೆಮಟಾಲಜಿ ಮತ್ತು ರಕ್ತ ವರ್ಗಾವಣೆ ವಿಭಾಗದ ಪ್ರಾಧ್ಯಾಪಕಿ ಮತ್ತು ಮುಖ್ಯಸ್ಧೆಯಾದ ಡಾ.ಶಮೀ ಶಾಸ್ತ್ರಿ ನೇತೃತ್ವದ ರಕ್ತ ಕೇಂದ್ರದ ವೈದ್ಯರ ತಂಡವು ಈ ಅಪರೂಪದ ಕಸಿಗೆ ಸಹಕರಿಸಿದೆ. ಮಕ್ಕಳ ರಕ್ತ ಶಾಸ್ತ್ರ ಮತ್ತು ಆಂಕೊಲೊಜಿ ವಿಭಾಗದ ಮುಖ್ಯಸ್ಥರಾದ ಡಾ.ವಾಸುದೇವ ಭಟ್ ಕೆ ಮಾಹಿತಿ ನೀಡಿ, “ರಾಜ್ಯದ ಈ ಕರಾವಳಿ ಪ್ರದೇಶದಲ್ಲಿ ಯಶಸ್ವಿ ಟಿ ಸೆಲ್-ಡಿಪ್ಲೀಟೆಡ್ ಹ್ಯಾಪ್ಲೋಡೆಂಟಿಕಲ್ ಬೋನ್ ಮ್ಯಾರೋ ಟ್ರಾನ್ಸ್ಪ್ಲಾಂಟ್ಗೆ ಒಳಗಾದ ಮೊದಲ ಪ್ರಕರಣ ಇದು. ಈ ನವೀನ ತಂತ್ರಜ್ಞನದೊಂದಿಗೆ, ದೊಡ್ಡ ತೊಡಕುಗಳಿಲ್ಲದೆ ಸಂಪೂರ್ಣವಾಗಿ ಹೊಂದಾಣಿಕೆಯ ದಾನಿಯು ಇಲ್ಲದಿರುವಾಗ ಕೂಡ ನಾವು ಮೂಳೆ ಮಜ್ಜೆಯ ಕಸಿ ಮಾಡಬಹುದಾಗಿದೆ” ಎಂದರು .
ವೈದ್ಯಕೀಯ ಅಧೀಕ್ಷಕರಾದ ಡಾ.ಅವಿನಾಶ್ ಶೆಟ್ಟಿ ಅವರು ಅಪರೂಪದ ರಕ್ತದ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ಜೀವ ಉಳಿಸುವ ನಿಟ್ಟಿನಲ್ಲಿ ಮಕ್ಕಳ ರಕ್ತ ಶಾಸ್ತ್ರ ಆಂಕೊಲಾಜಿ ವಿಭಾಗದ ವೈದ್ಯರ, ರಕ್ತನಿಧಿ ವೈದ್ಯರ ಮತ್ತು ಶುಶ್ರೂಷಾ ಸೇವೆಗಳ ತಂಡದ ಕಾರ್ಯವನ್ನು ಶ್ಲಾಘಿಸಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…