Featured

ಮಣಿಪಾಲ : MIT ಕಾಲೇಜಿನಲ್ಲಿ 52 ವಿದ್ಯಾರ್ಥಿಗಳಿಗೆ ಕೊರೊನಾ ದೃಢ ; ಕಾಲೇಜು ಕ್ಯಾಂಪಸ್​ ಈಗ ಕಂಟೇನ್ಮೆಂಟ್ ಜೋನ್ -Vishwanews24

MIT ಕಾಲೇಜಿನಲ್ಲಿ 52 ವಿದ್ಯಾರ್ಥಿಗಳಿಗೆ ಕೊರೊನಾ ದೃಢ ; ಕಾಲೇಜು ಕ್ಯಾಂಪಸ್​ ಈಗ ಕಂಟೇನ್ಮೆಂಟ್ ಜೋನ್ -Vishwanews24

ಉಡುಪಿ: ಜಿಲ್ಲೆಯ ಮಣಿಪಾಲದಲ್ಲಿರುವ ಪ್ರತಿಷ್ಠಿತ MIT ಕಾಲೇಜಿನಲ್ಲಿ ಇಂದು 27 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದ್ದು, ಒಟ್ಟು 52 ವಿದ್ಯಾರ್ಥಿಗಳು ಕೊರೊನಾ ಸೋಂಕಿತರಾಗಿದ್ದಾರೆ.

ಆದ್ದರಿಂದ ಕಾಲೇಜು ಕ್ಯಾಂಪಸ್​ನ ಇದೀಗ ಕಂಟೇನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಕಾಲೇಜಿಗೆ ಬಂದಿದ್ದ ಅಂತಾರಾಜ್ಯ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದಲ್ಲದೆ, ಸೋಂಕಿತರ ಪ್ರಾಥಮಿಕ ಸಂಪರ್ಕಿತರಲ್ಲೂ ಕೊರೊನಾ ಪತ್ತೆಯಾಗಿದೆ ಎಂದು ಉಡುಪಿ ಡಿಹೆಚ್​ಒ ಡಾ.ಸುಧೀರ್ ಚಂದ್ರಸೂಡ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಮಂಗಳೂರು: ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಲ್ಲಿ ಕೊರೊನಾ ದೃಢ , ಕಾಲೇಜ್ ಸೀಲ್ಡೌನ್ -Vishwanews24

ರಾಜ್ಯದಲ್ಲಿಂದು ಹೊಸದಾಗಿ 1,275 ಜನರಿಗೆ ಕೊರೊನಾ ದೃಢವಾಗಿದೆ. ಇದೀಗ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 9,63,614ಕ್ಕೇರಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ನಾಲ್ವರು ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಈವರೆಗೆ ಕೊರೊನಾದಿಂದ 12,407 ಜನರ ಅಸುನೀಗಿದ್ದಾರೆ. ಇದಲ್ಲದೆ, ಸೋಂಕಿತರ ಪೈಕಿ 9,40,968 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 10,220 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 786 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 4,13,485ಕ್ಕೇರಿದೆ. ಇಂದು ನಗರದಲ್ಲಿ ಕೊರೊನಾ ಸೋಂಕಿಗೆ ಮೂವರು ಬಲಿಯಾಗಿದ್ದಾರೆ. ಈವರೆಗೆ ಕೊರೊನಾಗೆ 4,530 ಜನರ ಅಸುನೀಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ : ಉಡುಪಿ: ಪ್ರಯಾಣಿಕರು ಮಾಸ್ಕ್ ಧರಿಸದೆ ಪ್ರಯಾಣಿಸಿದಲ್ಲಿ ಬಸ್ಸುಗಳ ಪರವಾನಿಗೆ ರದ್ದು, ಮಾಲಿಕರ ವಿರುದ್ದ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ ಜಗದೀಶ್ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

11 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

12 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

12 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

12 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

12 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

15 hours ago